ಶಿವಮೊಗ್ಗ: ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ ಹಣ ಬಾರದ ಕಾರಣ ಮಹಿಳೆಯರು ಗೃಹಲಕ್ಷ್ಮಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.
ಇಷ್ಟಕ್ಕೂ ಗೃಹಲಕ್ಷ್ಮೀಯ ಹಣ ಖಾತೆಗೆ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು? ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿಯೂ ನಿಮಗೆ ಹಣ ಬರುತ್ತಿಲ್ಲವಾದರೆ ಸರ್ಕಾರವೇ ನಿಮಗೊಂದು ಸಹಾಯವಾಣಿ ಸಂಖ್ಯೆಯನ್ನು ತಿಳಿಸಿದೆ. ನಿಮ್ಮ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಆಧಾರ್ ನಂಬರ್ ಮಿಸ್ ಮ್ಯಾಚ್ ಆಗಿದ್ದಲಿ ಇದರ ಮಾಹಿತಿಯನ್ನು ನೀಡಲು ಇಲಾಖೆ ಸಹಾಯವಾಣಿಯ ನಂಬರ್ ವೊಂದನ್ನು ನೀಡಿದೆ. ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಈ ಸಹಾಯವಾಣಿ ನೆರವಾಗಲಿದೆ.
8147500500 ಈ ನಂಬರ್ ಗೆ ನಿಮ್ಮ ಆಧಾರ್ ರಿಜಿಸ್ಟರ್ಡ್ ಮೊಬೈಲ್ ನಂಬರ್ ನಿಂದ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು ಮೆಸೆಜ್ ಮಾಡಿ. ಹೀಗೆ ಮೆಸೆಜ್ ಮಾಡಿದ ತಕ್ಷಣ ನಿಮ್ಮ ಪಡಿತರ ಚೀಟಿ ಸಂಖ್ಯೆ ಆಧರಿಸಿ ನಿಮ್ಮ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸಂದೇಶ ಬರಲಿದೆ. ಆ ಮೂಲಕ ನೀವು ನಿಮಗೆ ಯಾವ ಕಾರಣಕ್ಕಾಗಿ ಹಣ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಅಲ್ಲದೆ ಅದನ್ನು ಸರಿಪಡಿಸಿಕೊಳ್ಳಬಹುದಾಗಿದೆ. ನಿಮ್ಮ ಎಲ್ಲಾ ಪ್ರಶ್ನೆಗೂ ಈ ನಂಬರ್ ಮೆಸೆಜ್ ನಲ್ಲಿ ಮಾಹಿತಿ ಸಿಗಲಿದೆ.
ನಿಮ್ಮ ಅರ್ಜಿ ಅಸ್ವೀಕೃತವಾಗಿದ್ದರೇ, ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆಯೂ ಮಾಹಿತಿ ಬರಲಿದೆ. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಹೆಸರನ್ನು ತಿದ್ದುಪಡಿ ಮಾಡಿಸಲು ಸೆಪ್ಟೆಂಬರ್ 1 ರಿಂದ 10 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅವಧಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 1.28 ಫಲಾನುವಿಗಳಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 1.11 ಕೋಟಿ ಮಹಿಳೆಯರು ಮಾತ್ರ ನೋಂದಣಿಯನ್ನು ಮಾಡಿಸಿ ಕೊಂಡಿದ್ದಾರೆ. ಹೀಗಾಗಿ ಸರ್ಕಾರ ಗೃಹಲಕ್ಷ್ಮೀ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…