Categories: Shivamogga

ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ; ಕೆಎಸ್ಈ

ಶಿವಮೊಗ್ಗ: ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯ ಸರ್ಕಾರ ರೈತರನ್ನು ಮರೆತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.


ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಜನಪರವಾಗಿ ಇಲ್ಲ. ಆಂತರೀಕ ಮತ್ತು ಬಹಿರಂಗ ಬಡಿದಾಟದಲ್ಲಿ ಮುಳುಗಿದೆ. ಅವರ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ. ಹಣ ಕೊಟ್ಟರೂ ವಿದ್ಯುತ್ ಸಿಗುತ್ತಿಲ್ಲ. ಉಚಿತ ಬಸ್ ಯೋಜನೆಯಿಂದಾಗಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ಮತ್ತಿತರ ವಾಹನಗಳ ಮಾಲೀಕರು ಪರದಾಡುವಂತಾಗಿದೆ.  ನಿರುದ್ಯೋಗಿ ಪದವೀಧರರಿಗೆ ಇನ್ನೂ ಗ್ಯಾರಂಟಿ ಲಭ್ಯವಾಗಿಲ್ಲ. ಉಚಿತ ಅಕ್ಕಿ ಯೋಜನೆಯಲ್ಲೂ ಖಚಿತತೆ ಇಲ್ಲ ಎಂದರು.
ರಾಜ್ಯದ ರೈತರು ಬರಗಾಲಕ್ಕೆ ತುತ್ತಾಗಿ ಸಂಕಷ್ಟದಲ್ಲಿದ್ದಾರೆ. ಅಧಿಕಾರದಲ್ಲಿರುವ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ. ಬರಗಾಲ ಘೋಷಣೆ ಮಾಡಲು ಯೋಚಿಸುತ್ತಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ರೈತರ ಆತ್ಮಹತ್ಯೆ ಪ್ರಕರಣಗಳೆಷ್ಟು, ಬೆಳೆ ಪರಿಹಾರಕ್ಕಾಗಿ ಏನು ಮಾಡಿದ್ದಾರೆ ಎಂಬಿತ್ಯಾದಿ ರೈತರ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಶ್ವೇತಪತ್ರ  ಹೊರಡಿಸಬೇಕು ಎಂದು ಆಗ್ರಹಿಸಿದರು.


ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡ ಈಶ್ವರಪ್ಪ, ಈ ಮೈತ್ರಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನು ಕಾಂಗ್ರೆಸ್ ಪಡೆಯುವುದಿಲ್ಲ. ಈ ಮೈತ್ರಿಕೂಟದಿಂದ ಕಾಂಗ್ರೆಸ್ ನಾಯಕರಿಗೆ ಹೊಟ್ಟೆನೋವು ಶುರುವಾಗಿದೆ. ಬಿಜೆಪಿ ಕೋಮುವಾದಿ ಪಕ್ಷ ಎಂದು ಟೀಕಿಸುತ್ತಿದ್ದಾರೆ. ಬಿಜೆಪಿ ಯಾವತ್ತೂ ಕೋಮುವಾದಿ ಅಲ್ಲ. ಕಾಂಗ್ರೆಸ್ಸೇತರ ಸರ್ಕಾರ ರಾಜ್ಯದಲ್ಲಿ ಬಂದಾಗ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. ಆಗ ಇದೇ ಸಿದ್ದರಾಮಯ್ಯನವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದು, ಗೂಟದ ಕಾರನ್ನು ನೀಡಿದ್ದು ಬಿಜೆಪಿಯೇ. ಅದನ್ನು ಅವರು ನೆನಪಿಟ್ಟುಕೊಳ್ಳಬೇಕು ಎಂದು ಹಂಗಿಸಿದರು.

ರಾಜ್ಯ ಸರ್ಕಾರದ ವಿರುದ್ಧ ನಾಳೆ ಪ್ರತಿಭಟನೆ: ಮೇಘರಾಜ್
ರೈತ ವಿರೋಧ ರಾಜ್ಯಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಬೆಳಿಗೆ 10-30ಕ್ಕೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.
ಈ ಪ್ರತಿಭಟನೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.


ಪ್ರಧಾನಿ ಮೋದಿಯವರ ಜನ್ಮದಿನ ಸೆ.17ರಂದು ಆಗಿದ್ದು, ಇದರ ಅಂಗವಾಗಿ ಸೆ.17ರಿಂದ ಅ.2ರವರೆಗೆ ಬಿಜೆಪಿ ಸೇವಾ ಪಾಕ್ಷಿಕ ಆಚರಣೆ ಹಮ್ಮಿಕೊಂಡಿದೆ. ಇದರ ಅಂಗವಾಗಿ ರಕ್ತದಾನ ಶಿಬಿರ, ಆಯುಷ್ಮಾನ್ ಕಾರ್ಡ್ ವಿತರಣೆ, ದೀನದಯಾಳ್ ಜನ್ಮ ದಿನಾಚರಣೆ, ಎಲ್ಲಾ ಶಕ್ತಿ ಮಹಾಶಕ್ತಿ ಕೇಂದ್ರಗಳಿಗೆ ಭೇಟಿ, ಅ.2ರಂದು ಗಾಂಧಿ ಜಯಂತಿಯ ದಿನದಂದು ಸಮಾರೋಪ ಸಮಾರಂಭ, ಸ್ವಚ್ಛತಾ ಆಂದೋಲನದ ಮೂಲಕ ನಡೆಯಲಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಜಗದೀಶ್, ಶಿವರಾಜ್, ಸಾಲೇಕೊಪ್ಪ ರಾಮಚಂದ್ರ, ವಿನ್ಸೆಂಟ್, ಕಾಚಿನಕಟ್ಟೆ ಸತ್ಯನಾರಾಯಣ, ಜ್ಞಾನೇಶ್ವರ್, ಕೆ.ವಿ. ಅಣ್ಣಪ್ಪ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago