ಹೊಸನಗರ : ಕೇಂದ್ರ ಸರಕಾರ ಗ್ರಾಮೀಣ ಅಂಚೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿ ತಾಲೂಕು ಗ್ರಾಮೀಣ ಅಂಚೆ ನೌಕರರು ಇಲ್ಲಿನ ಅಂಚೆ ಕಛೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ ಅಂಚೆ ನೌಕರರಿಗೆ ಸೇವಾ ಭದ್ರತೆಯಿಲ್ಲ. ಸೂಕ್ತ ಸಂಬಳ, ಭತ್ತೆ, ಪಿಂಚಣಿ ಸೌಲಭ್ಯಗಳಿಲ್ಲ. ಹತ್ತಾರು ಬಾರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ. ದಿನಕ್ಕೆ 4 ಗಂಟೆ ಕೆಲಸ ಎಂದು ತಿಳಿಸಿ ದಿನವಿಡೀ ಕೇಲಸ ಮಾಡಬೇಕಾದ ಪರಿಸ್ಥಿತಿಯಿದೆ ಎಂದು ಆಕ್ರೋಶ ವ್ಕಕ್ತಪಡಿಸಿದರು.
2016ರಲ್ಲಿ ಕಮಲೇಶಚಂದ್ರ ಆಯೋಗದ ವರದಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಬೇಕು. ದಿನಕ್ಕೆ 8 ಗಂಟೆಗಳ ಕಾಲ ಕೆಲಸ ನೀಡುವುದು ಹಾಗೂ ಪಿಂಚಣಿ ಸೇರಿದಂಥೆ ಎಲ್ಲ ಭ್ತತ್ಯೆಗಳನ್ನು ಒದಗಿಸುವುದು. ಸೇವಾ ಹಿರಿತನದ ಆಧಾರದ ಮೇರೆಗೆ ವಿಶೇಷ ವೇತನ ಹೆಚ್ಚಳ ಮಾಡುವುದು, ಗುಂಪು ವಿಮಾ ವ್ಯಾಫ್ತಿಗೆ ಸೇರಿಸುವುದು, ಐದು ಲಕ್ಷ ರೂ. ಗ್ರಾಚುಟಿ ನೀಡುವುದು, ರಜಾ ಉಳಿಕೆ ಸೌಲಭ್ಯವನ್ನು 180 ದಿನಗಳಿಗೆ ಹೆಚ್ಚಿಸುವುದು, ನೌಕರರ ಕುಟುಂಬ ವರ್ಗದವರಿಗೆ ವೈದ್ಯಕೀಯ ಸೇವೆ ಸಿಗುವಂತೆ ವ್ಯವಸ್ಥೆ ಕಲ್ಪಿಸುವುದು ಮೊದಲಾದ ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಎಚ್.ವಿ.ಸಚಿನ್, ಲಕ್ಷ್ಮಿನಾರಾಯಣ, ಬಿ.ಕೆ.ವಿಶ್ವನಾಥ, ಕೇಶವ, ವಿನುತ, ರಮೇಶ, ಈಶ್ವರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…