Categories: ShikaripuraShivamogga

ಗ್ರಾಮೀಣ ಭಾಗದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಪಿಡಿಓಗಳು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ; ಬಿವೈವಿ

ಶಿಕಾರಿಪುರ: ಗ್ರಾಮೀಣ ಭಾಗದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಆಗಬಾರದು ಪಿಡಿಓಗಳು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಕನಕ ಜಯಂತಿಯ ರಜೆಯಲ್ಲೂ ಗುರುವಾರ ಸಂಜೆ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ನಿರ್ವಹಣೆ ಕುರಿತು ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು  ಎರಡು – ಮೂರು ಬಾರಿ ಬಿತ್ತನೆ ಮಾಡಿ ಕೈಸುಟ್ಟು ಕೊಂಡಿದ್ದಾರೆ. ಮತ್ತೆ ಅವರಿಗೆ ಸಮಸ್ಯೆಗಳು ಆಗಬಾರದು. ಅಂಜನಾಪುರ ಮತ್ತು ಅಂಬಲಿಗೋಳ ಜಲಾಶಯದ ಅಚ್ಚು ಕಟ್ಟು ರೈತರುಗಳು ಈ ಬಾರಿ ಬೇಸಿಗೆ ಭತ್ತದ ಬೆಳೆಯನ್ನು ಬೆಳೆಯಬಾರದು ಏಕೆಂದರೆ ಜಲಾಶಯದಲ್ಲಿ ಕುಡಿಯುವ ನೀರಿಗೆ ಮಾತ್ರ ನೀರು ಲಭ್ಯವಿದ್ದು ಭತ್ತದ ಬೆಳೆಗೆ ಪೂರೈಸಲು ನೀರು ಸಾಕಾಗುವುದಿಲ್ಲ ಆದಕಾರಣ ಕೃಷಿ ಇಲಾಖೆಯ ಸಲಹೆಯಂತೆ ಉದ್ದು ಹೆಸರು ಹುರುಳಿ ಶೇಂಗಾ ಮುಂತಾದ ದ್ವಿದಳ ಧಾನ್ಯಕ್ಕೆ ಸಂಬಂಧದ ಬೆಳೆಗಳನ್ನು ಬೆಳೆದುಕೊಳ್ಳಬೇಕಲ್ವದೇ, ಈ ಕುರಿತು ಕೃಷಿ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಸರಿಯಾದ ಮಾಹಿತಿಯನ್ನು ಕರಪತ್ರಗಳನ್ನು ಹೊರಡಿಸುವುದರ ಮೂಲಕ ರೈತರಿಗೆ ಯಾವ ಬೆಳೆ ಬೆಳೆಯಬೇಕು ಎಂದು ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿ ಮಾಹಿತಿ ನೀಡಬೇಕಲ್ವದೇ, ಬಡ ಕಾರ್ಮಿಕರುಗಳು ಗುಳೇ ಹೋಗುವುದನ್ನು ತಡೆಗಟ್ಟಬೇಕು. ಎನ್.ಆರ್.ಐ.ಇ.ಜಿ ಯೋಜನೆ ಅಡಿಯಲ್ಲಿ ಅವರಿಗೆ ಉದ್ಯೋಗವನ್ನು ಕಲ್ಪಿಸಿ ತಾಲ್ಲೂಕಿನಿಂದ ಗುಳೇ ಹೋಗುವ ಜನತೆಯನ್ನು ತಡೆಗಟ್ಟಿ ಇದ್ದ ಗ್ರಾಮದಲ್ಲಿಗೆ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಸೂಚನೆ ನೀಡಿದರು.

ಬರಗಾಲದ ತುರ್ತು ಸಂದರ್ಭ ಇದಾಗಿದ್ದು ನಾನು ರಾಜ್ಯ ಪ್ರವಾಸದಲ್ಲಿ ಇದ್ದರೂ ಯಾವುದೇ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಏನೇ ಸಮಸ್ಯೆಗಳು ಉಂಟಾದಲ್ಲಿ ತಕ್ಷಣ ನನಗೆ ದೂರವಾಣಿ ಮೂಲಕ ಸಂಪರ್ಕ ಮಾಡಬಹುದು  ಸಂಪರ್ಕಿಸಲು ಸಾಧ್ಯವಾಗದಿದ್ದರೆ ಮೆಸೇಜ್ ಮಾಡಿ ಸಮಸ್ಯೆಯನ್ನು ತಿಳಿಸಿದರೆ ಕೂಡಲೇ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಪಟ್ಟಣದಲ್ಲಿ 2024 ರ ಜೂನ್ ವರೆಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದು ಏಕೆಂದರೆ ಅಂಜನಾಪುರ ಜಲಾಶಯದಲ್ಲಿ ಈಗ ಸಾಕಷ್ಟು ನೀರು ಸಂಗ್ರಹಣೆ ಇದೆಯೆಂದು ಪುರಸಭಾ ಮುಖ್ಯ ಅಧಿಕಾರಿ ಭರತ್ ಮಾಹಿತಿ ನೀಡಿದರು.


ತಾಲೂಕು ಕೃಷಿ ಅಧಿಕಾರಿ ಕಿರಣ್ ಕುಮಾರ್  ಮಾಹಿತಿ ನೀಡಿ ಮಳೆ  ಆಶ್ರಿತ ಪ್ರದೇಶದಲ್ಲಿ  ಮೆಕ್ಕೆಜೋಳವನ್ನು 16,000 ಹೆಕ್ಟರಲ್ಲಿ ಬೆಳೆಯಲಾಗಿದ್ದು ಇದರಲ್ಲಿ 11,863 ಜನರಿಗೆ 4.5 ಕೋಟಿ ಮಧ್ಯಂತರ ಬೆಳೆವಿಮೆ ನೇರವಾಗಿ ರೈತರ ಖಾತೆಗೆ ಜಮಾ ಆಗಿದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲೇಶಪ್ಪ ಬೀರಪ್ಪ ಪೂಜಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಆಡಳಿತ ಅಧಿಕಾರಿಗಳು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago