ಚಂದ್ರಯಾನ-3 ಯೋಜನೆಯಲ್ಲಿ ತೀರ್ಥಹಳ್ಳಿ ಮಾಜಿ ಎಂಎಲ್ಎ ಪುತ್ರಿ ; ಅಭಿನಂದನೆಗಳ ಮಹಾಪೂರ
ಶಿವಮೊಗ್ಗ : ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ.
ಇಸ್ರೋ ವಿಜ್ಞಾನಿಗಳಲ್ಲಿ ತೀರ್ಥಹಳ್ಳಿ ಮೂಲದ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ.
ಹೌದು, ತೀರ್ಥಹಳ್ಳಿ ಮೂಲದ ಶಿವಾನಿ ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರ ಪುತ್ರಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಉನ್ನತ ವ್ಯಾಸಂಗ ಮಾಡಿ ನಂತರ ಇಸ್ರೋದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ.
ವಿಜ್ಞಾನಿ ಶಿವಾನಿ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರು ಪೋಸ್ಟ್ ಹಾಕುವ ಮೂಲಕ ‘ಶಿವಮೊಗ್ಗ ಮೂಲದ ವಿಜ್ಞಾನಿ’ ಎಂದು ಹೆಮ್ಮೆ ಪಡುತ್ತಿದ್ದಾರೆ. ಮಲೆನಾಡು ಮೂಲದ ಮಹಿಳೆಯ ಸಾಧನೆಗೆ ಎಲ್ಲಾ ಕಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.