ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಬಸ್ !

0 766

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ವೊಂದು ರಸ್ತೆ ಪಕ್ಕದ ಭತ್ತದ ಗದ್ದೆಗೆ ಉರುಳಿ ಬಿದ್ದ ಘಟನೆ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ಬಳಿ ನಡೆದಿದೆ.

ಬಸ್‌ನಲ್ಲಿ ಆರು ಜನ ಪ್ರಯಾಣಿಕರಿದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಸ್ ಚಾಲಕ ಫೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್ ಪಲ್ಟಿಯಾಯಿತು ಎಂದು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿಸಿದ್ದಾರೆ. ನಂತರ ಕ್ರೇನ್ ಮೂಲಕ ಬಸ್‌ ಅನ್ನು ಮೇಲಕ್ಕೆತ್ತಲಾಯಿತು.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!