ಶಿವಮೊಗ್ಗ : ಭಾರತದ ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.
ಭಾರತದ ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆಯ ಅವಧಿಯಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಆಯೋಗದ ಪ್ರತಿಯೊಂದು ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಚುನಾವಣಾ ಆಯೋಗದ ಆದೇಶವನ್ನು ಪಾಲಿಸದಿದ್ದರೆ ಸಂಬಂಧಪಟ್ಟ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವ ಹಕ್ಕು ಆಯೋಗಕ್ಕೆ ಇರುತ್ತದೆ. ಈಗ ಅಂತಹ ಪರಿಸ್ಥಿತಿಯಲ್ಲಿ ಈ ಚುನಾವಣಾ ನೀತಿ ಸಂಹಿತೆ ಎಂದರೇನು ಎಂಬುದನ್ನು ತಿಳಿಯುವ ಅಗತ್ಯವಿರುತ್ತದೆ. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ.
ಇಂದಿನಿಂದಲೇ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ, ಮುಖ್ಯಮಂತ್ರಿ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ, ಸರ್ಕಾರಿ ವಾಹನ ಸೇರಿದಂತೆ ಇತರೆ ಸವಲತ್ತುಗಳನ್ನು ಬಳಸುವಹಾಗಿಲ್ಲ. ಸರ್ಕಾರ ಯಾವುದೇ ಯೋಜನೆಯನ್ನು ಘೋಷಣೆ ಮಾಡುವಂತಿಲ್ಲ, ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಭಾಗಿಯಾಗುವಂತಿಲ್ಲ. ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ, ಎಸ್ಕಾರ್ಟ್ ಸೇರಿದಮತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ.
ಚುನಾವಣಾ ನೀತಿ ಸಂಹಿತೆ ಎಂದರೇನು?
ಚುನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷದ ನಾಯಕರು ನೀತಿ ಸಂಹಿತೆಯನ್ನು ಪಾಲಿಸಲೇಬೇಕಾಗುತ್ತದೆ. ವಾಸ್ತವವಾಗಿ, ಚುನಾವಣಾ ದಿನಾಂಕಗಳನ್ನು ಘೋಷಿಸಿದ ತಕ್ಷಣ, ರಾಜಕಾರಣಿಗಳಿಗೆ ತಕ್ಷಣವೇ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಅವರು ಏನು ಮಾಡಬೇಕು ಮತ್ತು ಏನು ಮಾಡಬಾರದು. ಆಯೋಗವು ಹೊರಡಿಸಿದ ಮಾರ್ಗಸೂಚಿಗಳನ್ನು ಚುನಾವಣಾ ಅಭ್ಯರ್ಥಿಗಳು ತಮ್ಮ ಭಾಷಣಗಳಲ್ಲಿ ಮಾತ್ರವಲ್ಲದೆ ಎಲ್ಲಾ ರೀತಿಯ ಚುನಾವಣಾ ಪ್ರಚಾರಗಳಲ್ಲಿ ಮತ್ತು ಅವರ ಪ್ರಣಾಳಿಕೆಗಳಲ್ಲಿಯೂ ಅನುಸರಿಸಬೇಕು.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…