Categories: Shivamogga

ಚುನಾವಣೆ ಹೊತ್ತಲ್ಲಿ ಇದು ಬೇಕಿತ್ತಾ ?

ಶಿವಮೊಗ್ಗ : ಚುನಾವಣೆಯ ಈ ಹೊತ್ತಿನಲ್ಲಿ ತಮಿಳು ಸಮಾಜದ ಜನರ ಮನವೊಲಿಸಲು ಬಿಜೆಪಿ ಪ್ರಮುಖರು ಆಡಿದ ಆಟಕ್ಕೆ ಮಾಜಿ ಉಪಮುಖ್ಯಮಂತ್ರಿ ಹಿಗ್ಗಾಮುಗ್ಗಾ ಜಾಡಿಸಿದ ಘಟನೆ ಇಂದಿಲ್ಲಿ ನಡೆದಿದೆ.

ನಗರ ಬಿಜೆಪಿಯವರು ಇಲ್ಲಿನ ಎನ್ ಇ ಎಸ್ ಮೈದಾನದಲ್ಲಿ‌ ಏರ್ಪಡಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಕನ್ನಡ ನಾಡಗೀತೆ ಬದಲು ತಮಿಳು ನಾಡಗೀತೆ ಹಾಕಿ ಎಡವಟ್ಟು ಮಾಡಿದ ಘಟನೆ ಸಂಭವಿಸಿದೆ.

ಈ ಗೀತೆ ಕೇಳಿದಾಕ್ಷಣ ಆಕ್ರೋಶಗೊಂಡ ಶಾಸಕ ಈಶ್ವರಪ್ಪ ಆಸನದಿಂದ ಎದ್ದು ಬಂದು ಅದನ್ನು ನಿಲ್ಲಿಸುವಂತೆ ಸೂಚಿಸಿದರಲ್ಲದೆ, ಸಂಘಟಕರನ್ನು ಸಿಟ್ಟಿನಿಂದ ಕಣ್ಣಿನಿಂದಲೇ ಬೆದರಿಸಿದರು.


ಕನ್ನಡ ನಾಡಗೀತೆ ಇಲ್ವಾ ? ಎಂದು ಪ್ರಶ್ನಿಸಿದರು. ಚುನಾವಣೆ ಹೊತ್ತಿನಲ್ಲಿ ಇದು ಬೇಕಿತ್ತಾ ? ಎಂದು ಮೆಲ್ಲಗೆ ಹೇಳುತ್ತಾ ನಂತರ ಮೈಕ್ ಹಿಡಿದು ಕನ್ನಡ ನಾಡಗೀತೆ ಹಾಡಲು ಮಹಿಳೆಯರಿಗೆ ಕೇಳಿದರು. ಯಾರಾದರೂ ಹಾಡುವವರಿದ್ದರೆ ಬನ್ನಿ ಎಂದು ಆಹ್ವಾನಿಸಿದರು.

ಕೆಲವು ಮಹಿಳೆಯರು ಮುಂದೆ ಬಂದರಾದರೂ ಕನ್ನಡ ನಾಡಗೀತೆಯನ್ನು ಸಂಘಟನೆಯವರು ಹಾಕಿದರು. ನಂತರ ಕನ್ನಡ ನಾಡಗೀತೆ ಹಾಡಲಾಯಿತು. ಇದೆಲ್ಲಾ ಬೇಕಿತ್ತಾ ? ತಮಿಳು ಸಮಾಜದವರು ಆ ಹಾಡು ಕೇಳಿದ್ದರಾ ?

Malnad Times

Recent Posts

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

41 mins ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

2 hours ago

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ !

ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…

3 hours ago

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

5 hours ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

8 hours ago

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

17 hours ago