Categories: Shivamogga

ಜನಸಾಮಾನ್ಯರಿಗೆ ನಿವೇಶನಗಳನ್ನು ನೀಡಲು ಲೇಔಟ್ ಸಿದ್ದಪಡಿಸಿ ; ಸಚಿವ ಬಿ.ಎಸ್.ಸುರೇಶ

ಶಿವಮೊಗ್ಗ : ಬಡವರು, ಮಧ್ಯಮವರ್ಗದವರಿಗೆ ಸೂಡಾದಿಂದ ಸರ್ಕಾರಿ ಲೇಔಟ್‍ಗಳನ್ನು ಸಿದ್ದಪಡಿಸಿ ನೀಡಬೇಕೆಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರಾದ ಬಿ ಎಸ್ ಸುರೇಶ ಸೂಡಾ ಆಯುಕ್ತರಿಗೆ ತಿಳಿಸಿದರು.
ನಗರಾಭಿವೃದಿ ಪ್ರಾಧಿಕಾರ, ಮಹಾನಗರಪಾಲಿಕೆ, ಕೆಯುಐಡಿಎಫ್‍ಸಿ, ಕನನೀಸ&ಒಚ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಜಿಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಸಿ ಅವರು ಮಾತನಾಡಿದರು.


ಜನಸಾಮಾನ್ಯರಿಗೆ ಅವರ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಕೇವಲ ಖಾಸಗಿಯವರಿಗೆ ಅನುಮತಿ ನೀಡುವುದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸವಲ್ಲ. ಶೀಘ್ರದಲ್ಲಿ ನಗರದಲ್ಲಿ ಸ್ಥಳ ಹುಡುಕಿ 250 ರಿಂದ 500 ಎಕರೆಯ ಸರ್ಕಾರಿ ಲೇಔಟ್ ಸಿದ್ದಪಡಿಸಿ ಸಾರ್ವಜನಿಕರಿಗೆ ನೀಡಬೇಕು. ಅಲ್ಲಿಯವರೆಗೆ ಖಾಸಗಿಯವರಿಗೆ ಅನುಮತಿ ನೀಡುವ ಹಾಗಿಲ್ಲ ಎಂದು ತಾಕೀತು ಮಾಡಿದರು.


ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಶಿವಮೊಗ್ಗದಲ್ಲಿ ಸರ್ಕಾರಿ ಲೇಔಟ್ ತುಂಬಾ ಕಡಿಮೆ ಇದೆ. ಸ್ಥಳೀಯ ಶಾಸಕರು, ಸಂಸದರು ಮತ್ತು ಡಿಸಿ ಯವರೊಂದಿಗೆ ಸೂಡಾ ಆಯುಕ್ತರು ಚರ್ಚಿಸಿ ಸ್ಥಳ ಗುರುತಿಸಿ ಲೇಔಟ್ ಅಭಿವೃದ್ದಿಪಡಿಸಬೇಕು ಹಾಗೂ ಸಿಡಿಪಿ ಯನ್ನು ಶೀಘ್ರದಲ್ಲಿ ಸಿದ್ದಪಡಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದರು.


ಪ್ರಾಧಿಕಾರದಿಂದ ಸರ್ಕಾರಿ ಲೇಔಟ್‍ಗಳು, ರಸ್ತೆಗಳು, ಕೆರೆ ಅಭಿವೃದ್ದಿ ಸೇರಿದಂತೆ ಅಭಿವೃದ್ದಿ ಕೆಲಸಗಳು ಆಗಬೇಕು. ಡಿಪಿಆರ್ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಎಲ್ಲ ಕೆಲಸಗಳು ಪಾರದರ್ಶಕವಾಗಿ ನಡೆಯಬೇಕು ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ನವರು ಆಶ್ರಯ ಯೋಜನೆಯಡಿ ಬಂದಿರುವ ಅರ್ಜಿದಾರರಿಗೆ ನಿವೇಶನ ಹಂಚಿಕೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯಡಿ ಬಂದಿರುವ ಸುಮಾರು 3 ಸಾವಿರ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.
ಪಾಲಿಕೆ ಆಯುಕ್ತರು ಮತ್ತು ಸ್ಮಾರ್ಟ್‌ ಸಿಟಿ ಎಂಡಿ ಮಾಯಣ್ಣ ಗೌಡ ಮಾತನಾಡಿ, ಸ್ಮಾರ್ಟ್‍ಸಿಗೆ ಸಂಬಂಧಿಸಿದಂತೆ ರೂ.990 ಕೋಟಿ ಹಣ ಮಂಜೂರಾಗಿದ್ದು 71 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ 67 ಕಾಮಗಾರಿಗಳು ಪೂರ್ಣಗೊಂಡಿವೆ. ರೂ.920 ಕೋಟಿ ಪ್ರಗತಿಯಾಗಿದ್ದು ಶೇ.97 ಭೌತಿಕ ಮತ್ತು ಶೇ.92 ಆರ್ಥಿಕ ಪ್ರಗತಿಯಾಗಿದೆ. 4 ಕಾಮಗಾರಿ ಪ್ರಗತಿಯಲ್ಲಿದೆ ಎಂದರು.


ಸಚಿವರು ನಗರದ ಸ್ಮಾರ್ಟ್‍ಸಿಟಿ ಯೋಜನೆಯ ಕುರಿತು ಅನೇಕ ದೂರುಗಳು ಬಂದಿವೆ. ಯುಜಿ ಕೇಬಲ್, ರಸ್ತೆ, ಚರಂಡಿ ಇತರೆ ಕಾಮಗಾರಿ ಬಗ್ಗೆ ಸಾಕಷ್ಟು ದೂರುಗಳಿದ್ದು, ಸಮಗ್ರವಾಗಿ ಈ ದೂರುಗಳ ಕುರಿತು ಪರಿಶೀಲನೆ ನಡೆಸಿ, ಈ ಲೋಪಗಳು ಸರಿಯಾದ ಮೇಲೆ ಬಾಕಿ ಹಣ ಪಾವತಿಸಬೇಕು. ಕಳಪೆ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.


ಪಾಲಿಕೆ ವ್ಯಾಪ್ತಿಯಲ್ಲಿ 18 ಸಾವಿರ ಬೀದಿ ದೀಪ ಅಳವಡಿಕೆ ಆಗಿದೆ. ಶೇ.98 ಬೀದಿ ದೀಪಗಳು ಉರಿಯಬೇಕು. ಹೆಚ್ಚುವರಿ ಬೀದಿ ದೀಪಗಳನ್ನು ಅಳವಡಿಸಬೇಕು. ಸಮರ್ಪಕವಾಗಿ ನಿರ್ವಹಿಸಬೇಕು. ಹೆಚ್ಚುವರಿಗಯಾಗಿ ಅನುದಾನ ಬೇಕಾದಲ್ಲಿ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.
ಕೆರೆಗಳು, ಪಾರ್ಕ್ ಅಭಿವೃದ್ದಿ ಸೇರಿದಂತೆ ಪಾಲಿಕೆಗೆ ರೂ.25 ಕೋಟಿ ಹಣವನ್ನು ಮಂಜೂರು ಮಾಡಿದ್ದು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಯುಜಿಡಿ ಗೆ ರೂ.220 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದು, ಹಣ ಮಂಜೂರು ಮಾಡಲಾಗುವುದು, ರಿಸ್ಟೋರೇಷನ್ ಕಾಮಗಾರಿಯನ್ನು ಸಹ ಸಮರ್ಪಕವಾಗಿ ಮಾಡಬೇಕೆಂದರು.


ಪಾಲಿಕೆ, ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಕರ ವಸೂಲಾತಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು. ಹೊಸ ನಿಯಮದಂತೆ ನಿರ್ವಹಿಸಬೇಕು. ಇಲ್ಲವಾದಲ್ಲಿ ಶಿಸ್ತಿನ ಕ್ರಮ ವಹಿಸಲಾಗುವುದು. ಕುಡಿಯುವ ನೀರು, ಕಸ ನಿರ್ವಹಣೆ ಹಾಗೂ ಮುಖ್ಯವಾಗಿ ಎಲ್ಲಿಯೂ ನೀರು ಕಲುಷಿತವಾಗದಂತೆ ಕ್ರಮ ವಹಿಸಬೇಕೆಂದ ಅವರು. ಯುಜಿಡಿ ಪೈಪ್‍ಗಳು ಒಡೆದು ಹಾಳಾಗಿದ್ದರೆ ತಕ್ಷಣವೇ ಬೇರೆ ಹಾಕಬೇಕು. ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರ ವಹಿಸಬೇಕೆಂದ ಸೂಚಿಸಿದರು.


ನಗರ ಭಾಗದಲ್ಲಿ ಜನವರಿವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆನಂತರ ಕುಡಿಯುವ ನೀರನ್ನು ಉತ್ತಮವಾಗಿ ನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಬೇಕೆಂದರು.


ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಎಸ್‍ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಯುಡಿಸಿ ಯೋಜನಾ ನಿರ್ದೇಶಕ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಅಧಿಕಾರಿಗಳು ಪಾಲ್ಗೊಂಡಿದ್ದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

33 mins ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 hour ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

6 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

23 hours ago