ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಸೋಮವಾರ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆದ ಆಹಾರ ದಸರಾ-2023ರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ 2 ನಿಮಿಷದಲ್ಲಿ ಕೊಟ್ಟ ಕಡುಬು ಅವರೇಕಾಳು ಸಾಂಬಾರ್ ತಿನ್ನುವ ಸ್ಪರ್ಧೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸಾಂಕೇತಿಕ ಚಾಲನೆ ನೀಡಿದರು.
ಈ ಸ್ಪರ್ಧೆಯಲ್ಲಿ ಮಹಿಳೆಯರಲ್ಲಿ 8 ಕೊಟ್ಟೆ ಕಡುಬು ತಿಂದ ಶಿವಮ್ಮ ಪ್ರಥಮ, ಜ್ಯೋತಿ ಶ್ರೀನಿವಾಸ ದ್ವಿತೀಯ, ಗೀತಾ ತೃತೀಯ ಬಹುಮಾನ ಪಡೆದರು.
ಪುರುಷರಲ್ಲಿ 6 ಕೊಟ್ಟೆ ಕಡುಬು ತಿಂದ ವಿನೋದ್ ಪ್ರಥಮ, ರವಿಕಿರಣ್ ದ್ವಿತೀಯ, ನಾಗರಾಜ್ ತೃತೀಯ ಬಹುಮಾನ ಪಡೆದರು.
ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಕೆ.ಎನ್. ಗೀತಾ 8 ಬಾಳೆಹಣ್ಣು ತಿಂದು ಪ್ರಥಮ, ಸುಜಾತಾ ಎ.ಎನ್. ದ್ವಿತೀಯ, ತೃತೀಯ ಬಹುಮಾನ ಉಷಾ ಪಡೆದಿದ್ದಾರೆ.
ಪುರುಷರಲ್ಲಿ ದೀಪಕ್ ಶೆಟ್ಟಿ 7 ಬಾಳೆಹಣ್ಣು ತಿಂದು ಪ್ರಥಮ ಸ್ಥಾನ, ಮಧು ದ್ವಿತೀಯ, ರಾಜಶೇಖರ್ ತೃತೀಯ ಬಹುಮಾನ ಪಡೆದರು.
ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ, ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ಯಮುನಾ ರಂಗೇಗೌಡ, ಸುವರ್ಣಾ ಶಂಕರ್, ಆಹಾರ ದಸರಾ ಸಮಿತಿ ಅಧ್ಯಕ್ಷೆ ಆಶಾ ಚಂದ್ರಪ್ಪ, ಸದಸ್ಯರಾದ ಬಾನುಮತಿ, ವಿನೋದ್ಕುಮಾರ್, ಆರತಿ ಆ.ಮಾ. ಪ್ರಕಾಶ್ ಮತ್ತಿತರರಿದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…