Categories: ShikaripuraShivamogga

ಜಾತಿ ವ್ಯವಸ್ಥೆ ಸಮಾಜದಲ್ಲಿನ ಅನಿಷ್ಟ ಪದ್ಧತಿಯಾಗಿದ್ದು ಅದನ್ನು ಶಾಶ್ವತವಾಗಿ ಕಿತ್ತು ಹಾಕಬೇಕಾಗಿದೆ ; ಬಿವೈಆರ್

ಶಿಕಾರಿಪುರ : ಜಾತಿ ವ್ಯವಸ್ಥೆ ಸಮಾಜದಲ್ಲಿನ ಅನಿಷ್ಟ ಪದ್ಧತಿಯಾಗಿದ್ದು ಅದನ್ನು ಶಾಶ್ವತವಾಗಿ ಕಿತ್ತು ಹಾಕಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ (B.Y Raghavendra) ಹೇಳಿದರು.

ತಾಲೂಕು ಆಡಳಿತ ಹಾಗೂ ತಾಲೂಕು ಕುರುಬ ಸಮಾಜದ ವತಿಯಿಂದ ಪಟ್ಟಣದ ಕನಕ ಉದ್ಯಾನವನದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು  ಮಾತನಾಡುತ್ತಿದ್ದರು.

ಸಮ ಸಮಾಜದ ನಿರ್ಮಾಣಕ್ಕಾಗಿ ಕನಕದಾಸರು ಹಾಕಿಕೊಟ್ಟ ಮಾನವೀಯತೆಯ ಮೌಲ್ಯಗಳು ಇಂದಿಗೂ ಪ್ರಸ್ತುತ. ಅವರು ರಚಿಸಿದ ಕೀರ್ತನೆಗಳು ಮತ್ತು  ಮುಂಡಿಗೆಗಳನ್ನು ಅರ್ಥೈಸಿಕೊಂಡರೆ ಬದುಕಿನಲ್ಲಿ ನಾವು ಯಾವತ್ತೂ ಸನ್ಮಾರ್ಗದಲ್ಲಿಯೇ ನಡೆಯುತ್ತೇವೆ ಎಂದರು.

ತಮ್ಮ ಭಕ್ತಿಯ ಶಕ್ತಿಯಿಂದ ಭಗವಂತನನ್ನ ತಮ್ಮತ್ತ ತಿರುಗಿಸಿಕೊಂಡ ಮಹಾ ದೈಹಿಕ ಆದರ್ಶ ಪುರುಷ ಈ ಕನ್ನಡನಾಡಿನ ಹೆಮ್ಮೆ. ವಿಶ್ವಮಾನ್ಯ ಕನಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ ವಿಶ್ವಮಾನವತ ಪುರುಷನಾಗಿ ನೋಡಬೇಕು ಎಂದರು.

ಭದ್ರ ಕಾಡ ಮಾಜಿ ಅಧ್ಯಕ್ಷ ನಗರದ ಮಹದೇವಪ್ಪ ಮಾತನಾಡಿ, ಕುರುಬರು ಹೀನ ಕುಲದವರು ಎಂದು ಜರಿಯುವ ಆ ಸಮಯದಲ್ಲಿ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯ ಏನಾದರೂ ಬಲ್ಲಿರಾ ಎಂದು ಸಮಾನತೆಯ ತತ್ವವನ್ನು ಸಾರಿ ಕುರುಬ ಕುಲಕ್ಕೆ ಕಳಶ ಪ್ರಾಯರಾದರು. ಕುರುಬ ಕುಲದಲ್ಲಿ ಹುಟ್ಟಿದ್ದು ನಮ್ಮ ಹೆಮ್ಮೆ ಎಂದುಕೊಳ್ಳಬೇಕು ಎಂದರು. ಅವರ ಸಾಹಿತ್ಯ ಕೃಷಿ ಇಂದಿಗೂ ಮಾದರಿ ಆಗಿದೆ. ದಾಸ ಕೀರ್ತನೆಗಳು ಯಾವತ್ತಿಗೂ ಆದರ್ಶ ಎಂದರು.

ಕಾರ್ಯಕ್ರಮದಲ್ಲಿ ಕನಕದಾಸ ಸೇವಾ ಟ್ರಸ್ಟ್‌ನ ವತಿಯಿಂದ ಅಧ್ಯಕ್ಷರಾದ ಸುರೇಶ್ ನೇತೃತ್ವದಲ್ಲಿ ಪ್ರಸಾದ  ವಿನಿಯೋಗವನ್ನು ಮಾಡಲಾಯಿತು.     

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಮಲ್ಲೇಶಪ್ಪ ಬೀರಪ್ಪ ಪೂಜಾರ್,  ಕುರುಬ ಸಮಾಜದ ಅಧ್ಯಕ್ಷ ಕಬಾಡಿ ರಾಜಣ್ಣ, ಕನಕ ಮಂಟಪ ಹಾಗೂ ಕನಕ ಮೂರ್ತಿಯ ದಾನಿಗಳಾದ ಕೆ ಹಾಲಪ್ಪ, ಮಾಜಿ ಪುರಸಭಾ ಅಧ್ಯಕ್ಷರಾದ ಲಕ್ಷ್ಮಿ ಮಹಾಲಿಂಗಪ್ಪ, ರೂಪಕಲಾ ಹೆಗಡೆ, ಪುರಸಭಾ ಸದಸ್ಯ ಹುಲ್ಲುಮಾರ್ ಮಹೇಶ್, ಜೀನಹಳ್ಳಿ ಪ್ರಶಾಂತ್, ಕಸಬಾ ಸೊಸೈಟಿ ಅಧ್ಯಕ್ಷರಾದ ಬಡಗಿ ಪಾಲಾಕ್ಷಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಘು ಎಚ್ಎಸ್, ತಾಲೂಕು ಕುರುಬ ಸಮಾಜದ ಕಾರ್ಯದರ್ಶಿ ಬಿ ಎಲ್ ರಾಜು, ದೊಡ್ಡಪ್ಪ ಪಿ, ಮಾಲತೇಶ್ ಭಂಡಾರಿ, ಗುಡ್ಡಳ್ಳಿ ಶಿವಮೂರ್ತಿ, ಹೆಚ್‍.ಜಿ ಗಿರೀಶ್, ಬೆಣ್ಣೆ ಪ್ರವೀಣ್ ಪರಶುರಾಮ್ ಚೌಟಗಿ,  ಕರಿಬಸಪ್ಪ ಮುಂತಾದವರು ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago