ಶಿವಮೊಗ್ಗ : ಜಿಂಕೆ ಶಿಕಾರಿ ಮಾಡಿದ್ದ ಮೂವರು ಆರೋಪಿಗಳು ಅರಣ್ಯಾಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಉಂಬಳೇಬೈಲು ವಲಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಜಿಂಕೆ ಶಿಕಾರಿ ಮಾಡಿದ ಕಾರಣ 03 ಜನ ಆರೋಪಿಗಳ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಉಂಬಳೇಬೈಲು ಗ್ರಾಮದ ಹನುಮಂತಪ್ಪ ಬಿನ್ ತಿಮ್ಮಪ್ಪ, ಅಂಜನಪ್ಪ ಬಿನ್ ತಿಮ್ಮಪ್ಪ ಮತ್ತು ರಾಮ ಬಿನ್ ತಿಮ್ಮಾಭೋವಿ ಎಂಬುವವರು ಬಂಧಿತ ಆರೋಪಿಗಳು.
ಈ ಕಾರ್ಯಾಚರಣೆಯಲ್ಲಿ ಭದ್ರಾವತಿ ಡಿಸಿಎಫ್ ಆಶಿಶ್ ರೆಡ್ಡಿ, IFS ಹಾಗೂ ರತ್ನಪ್ರಭ, ACF ರವರ ಮಾರ್ಗದರ್ಶನದಲ್ಲಿ ಉಂಬಳೇಬೈಲು RFO ಎಸ್.ಎಂ ಶಿವರಾತ್ರೆಶ್ವರ ಸ್ವಾಮಿ, ಪವನ್ ಮಹೇಂದ್ರಕರ್ DyRFO, ಗಿಡ್ಡಸ್ವಾಮಿ DyRFO, ಗಸ್ತು ವನಪಾಲಕರಾದ ಸುನಿಲ್ ಸಾಸಲವಾಡ, ಮಾಲತೇಶ ಸೂರ್ಯವಂಶಿ, ಶ್ರೀಕಾಂತ್, ದಿನೇಶ, ಹಾಗೂ ಇತರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…