ಶಿವಮೊಗ್ಗ: ಜಿಲ್ಲೆಯ ಪಟಾಕಿ ಮಾರಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡುವಂತೆ ಸೂಚಿಸಿ ಪಟಾಕಿ ಮಾರಾಟಗಾರರ ಪರವಾನಿಗೆ ಹಾಗೂ ಸಂಬಂಧಪಟ್ಟ ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಲೈಸೆನ್ಸ್ ಹೊಂದಿರುವ ಜಿಲ್ಲೆಯ ಪಟಾಕಿ ಮಾರಾಟಗಾರರಿಗೆ ಸಾಂಪ್ರದಾಯಿಕ ಪಟಾಕಿಯನ್ನು ಹೊರತುಪಡಿಸಿ ಹೈಕೋರ್ಟ್ ಆದೇಶದಂತೆ ಹಸಿರು ಪಟಾಕಿಯನ್ನೇ ಮಾರಾಟ ಮಾಡುವಂತೆ ತಾವು ಆದೇಶಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಿಲ್ಲೆಯಾದ್ಯಂತ ಪರವಾನಿಗೆ ಹೊಂದಿರುವ ಪಟಾಕಿ ಮಾರಾಟಗಾರರ ಬಳಿ ಹಸಿರ ಪಟಾಕಿಗಳು ಇರುವುದಿಲ್ಲ. 2017ಕ್ಕೂ ಹಿಂದೆ ತಯಾರಾಗುತ್ತಿದ್ದ ಹಳೆಯ ಸಾಂಪ್ರದಾಯಿಕ ಪಟಾಕಿಗಳನ್ನೇ ಮಾರಾಟ ಮಾಡುತ್ತಿದ್ದಾರೆ. ಕಾರಣ ಹಸಿರು ಪಟಾಕಿಗಳು ಸಾಂಪ್ರದಾಯಿಕ ಪಟಾಕಿಗಳ ಬೆಲೆಗಿಂತ ಹೆಚ್ಚಿರುತ್ತದೆ. ಪರಿಸರ ಮಾಲಿನ್ಯ ಇಲಾಖೆ ಪರವಾನಿಗೆಯನ್ನು ಪರಿಶೀಲಿಸದೆ ನಿರ್ಲಕ್ಷ್ಯದಿಂದಾಗಿ 2017ಕ್ಕೂ ಹಿಂದೆ ತಯಾರಾಗುತ್ತಿದ್ದ ಪಟಾಕಿಗಳಲ್ಲಿ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುವ ರಾಸಾಯನಿಕಗಳು ಹೆಚ್ಚು ಸೇರ್ಪಡೆಯಾಗುತ್ತಿದ್ದವು. ಹೈಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನೇ ಮಾರಾಟ ಮಾಡುವಂತೆ ಸೂಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಆದ್ದರಿಂದ ಜಿಲ್ಲೆಯಾದ್ಯಂತ ಹಸಿರು ಪಟಾಕಿಗಳು ಮಾರಾಟಗಾರರ ಬಳಿ ಇವೆಯೇ ಎಂದು ಖಚಿತಪಡಿಸಿಕೊಂಡು ಪರವಾನಿಗೆ ನವೀಕರಣ ಮಾಡಿಸಿಕೊಂಡಿದ್ದಾರೆಯೇ ಎಂದು ಪರಿಶೀಲಿಸಿ ಮಾರಾಟ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಗಣೇಶ್ ಮತ್ತು ತ್ಯಾಗರಾಜ್ ಭಾಗವಹಿಸಿದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…