Categories: Shivamogga

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಅನುಚಿತ ವರ್ತನೆ ; ಖಂಡನೆ

ಶಿವಮೊಗ್ಗ : ಇತ್ತೀಚೆಗೆ ನಡೆದ ಸರ್ಕಾರಿ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ಸಂದರ್ಭದಲ್ಲಿ ಕೆಲವರು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ನಿರಂಜನಮೂರ್ತಿಯವರಿಗೆ ನಿಂದಿಸಿ ಮಾತನಾಡಿದ್ದನ್ನು ಜಿಲ್ಲಾ ಕರಾಟೆ ಸ್ಪೋರ್ಟ್ಸ್, ಕರಾಟೆ-ಡೊ ಸಂಸ್ಥೆಯು ಖಂಡಿಸುತ್ತದೆ ಎಂದು ಅಧ್ಯಕ್ಷ ಚಂದ್ರಕಾಂತ್ ಜಿ. ಭಟ್ ಹೇಳಿದರು.


ಅವರು ಬುಧವಾರ ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಸೆ.23ರಂದು ದುರ್ಗಿಗುಡಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ದೈಹಿಕಶಿಕ್ಷಕರ ಸಂಘ ಹಾಗೂ ಕರಾಟೆ ತೀರ್ಪುಗಾರರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ನಡೆದಿತ್ತು. ಈ ಪಂದ್ಯಾವಳಿಯಲ್ಲಿ 400ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು ಎಂದರು.


ಪಂದ್ಯಾವಳಿಯಲ್ಲಿ ಭಾಗವಹಿಸಲು ಅನೇಕ ನಿಯಮಾವಳಿ ರೂಪಿಸಲಾಗಿತ್ತು. ವ್ಯವಸ್ಥಿತವಾಗಿ ಪಂದ್ಯಾವಳಿ ನಡೆಯಲು ಅನುಕೂಲವಾಗುವಂತೆ ಕ್ರೀಡಾಪಟುಗಳ ತೂಕ ಹಾಗೂ ಅರ್ಹತಾ ಪ್ರಮಾಣ ಪತ್ರಗಳ ಪರಿಶೀಲನೆ ನಡೆಯಿತು. ಈ ಅರ್ಹತಾ ಪತ್ರಕ್ಕೆ ಶಾಲಾ ಮುಖ್ಯೋಪಾಧ್ಯಾಯರ ಸಹಿ ಹಾಗೂ ಸೀಲ್ ಇರಬೇಕಿತ್ತು. ಆದರೆ ಹಲವರು ಈ ನಿಯಮವನ್ನು ಮೀರಿ ಯಾವ ಸಹಿಯೂ ಇಲ್ಲದ ಪ್ರಮಾಣ ಪತ್ರ ತಂದಿದ್ದರು. ತೀರ್ಪುಗಾರರು ಇವುಗಳನ್ನು ತಿರಸ್ಕರಿಸಿದ್ದರು. ಇದನ್ನೇ ನೆಪವಾಗಿಟ್ಟುಕೊಂಡು ಕೆಲವು ಪೋಷಕರು ಮತ್ತು ಕೆಲವು ಅನಧಿಕೃತ ಕರಾಟೆ ಸಂಸ್ಥೆಗಳು ಆಯೋಜಕರಾಗಿದ್ದ ನಿರಂಜನಮೂರ್ತಿಯವರಿಗೆ ಅವಹೇಳನಕಾರಿ ಮಾತನಾಡಿದ್ದರು. ಕೆಲವು ಪತ್ರಿಕೆಗಳಲ್ಲಿ ಇದು ಪ್ರಕಟವೂ ಆಗಿತ್ತು. ಇದು ಖಂಡನೀಯ ಎಂದರು.


ಈ ಬಾರಿಯ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಿ ನಡೆದಿದೆ. ವ್ಯವಸ್ಥಿತವಾಗಿ ಅಧಿಕಾರಿ ವರ್ಗದವರು ಸ್ಪಂದಿಸಿದ್ದಾರೆ. ಆದರೆ ಪ್ರತಿ ಬಾರಿಯಂತೆ ಹೇಗೇಗೋ ಪಂದ್ಯಾವಳಿ ನಡೆದಿಲ್ಲ. ತುಂಬಾ ಬಿಗಿಯಾದ ನಿಯಮಾವಳಿಗಳನ್ನು ಅನುಸರಿಸಲಾಗಿತ್ತು. ಒಂದು ಶಾಲೆಯಿಂದ ಒಬ್ಬ ಕ್ರೀಡಾಪಟುವಿಗೆ ಅವಕಾಶ ನೀಡಲಾಗಿತ್ತು. ಆದರೆ ಇಬ್ಬರು ಬಂದಿದ್ದರಿಂದ ಒಬ್ಬರಿಗೆ ಅವಕಾಶ ನೀಡಲಾಗಿತ್ತು. ಕ್ರೀಡೆ ನಡೆಯುವ ಸ್ಥಳದಲ್ಲಿ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ ಎಂದರು.


ಇಷ್ಟೆಲ್ಲಾ ಅಚ್ಚುಕಟ್ಟಾಗಿ ನಡೆದಿದ್ದರೂ ಕೂಡ ಕೆಲವರು ಬೇಕೆಂದೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅಧಿಕಾರಿಗಳನ್ನು ನಿಂದಿಸುವ ಮಟ್ಟಕ್ಕೆ ಹೋಗಿದ್ದಾರೆ. ಕರಾಟೆಯ ಹೆಸರಲ್ಲಿ ಅನಧಿಕೃತ ಕರಾಟೆ ಸಂಸ್ಥೆಗಳು ಹುಟ್ಟಿಕೊಂಡಿವೆ. ಅವರ ಹತ್ತಿರ ಹಣ ಇರುವುದರಿಂದ ಬೇಗನೇ ಪ್ರಚಾರ ಪಡೆಯುತ್ತಾರೆ. ಹಾಗೂ ಕ್ರೀಡೆಗಳನ್ನು ಸರಿಯಾಗಿ ಕಲಿಸುವುದಿಲ್ಲ. ಇದು ತಪ್ಪಬೇಕು. ಅರ್ಹ ಪ್ರತಿಭಾವಂತರಿಗೆ ಅವಕಾಶ ಸಿಗಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ನವೀನ್, ಮಹಾಬಲ ಜೋಯ್ಸ್, ಮಿಥುನ್, ರಾಘವೇಂದ್ರ, ಸಾದಿಕ್ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago