ರಿಪ್ಪನ್ಪೇಟೆ: ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿದ್ಯಾನಗರ ರಸ್ತೆಯಿಂದ ಕೆರೆಹಳ್ಳಿ ಗ್ರಾಮಕ್ಕೆ ಜಲಜೀವನ್ ಮಿಷನ್ ಯೋಜನೆಯಡಿ ನೀರು ಸರಬರಾಜು ಮಾಡುವ ಪೈಪ್ಲೈನ್ ಕಾಮಗಾರಿ ಮಾಡುತ್ತಿದ್ದು ಪೈಪ್ಲೈನ್ ಅಳವಡಿಸಿದ ಮೇಲೆ ಹೊಂಡವನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ಸಾರ್ವಜನಿಕರು ರಾತ್ರಿ ವೇಳೆ ಹೊಂಡಕೆ ಬಿದ್ದ ಘಟನೆಗಳು ನಡೆದಿದ್ದರೂ ಕೂಡಾ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದಾರೆಂದು ವಿದ್ಯಾನಗರ ವಿವಾಸಿ ರಾಘವೇಂದ್ರ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ಜನಪರ ಯೋಜನೆಗಳಲ್ಲೊಂದಾಗಿರುವ ಜಲಜೀವನ್ ಯೋಜನೆಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಜಲಜೀವನ್ ಯೋಜನೆಗೂ ಚಾಲನೆ ನೀಡಿದ್ದು ಈ ಯೋಜನೆಯ ಗ್ರಾಮೀಣ ಪ್ರದೇಶದ ಒಂಟಿ ಮನೆಯ ಫಲಾನುಭವಿಗೂ ತಲುಪುವಂತಾಗಬೇಕು ಎಂಬ ಸದುದ್ದೇಶದಿಂದಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆಯು ಅನುಷ್ಠಾನದಲ್ಲಿ ಅಧಿಕಾರಿಗಳು ಬೇಜವಾಬ್ದಾರಿ ವಹಿಸಿದ್ದಾರೆಂದು ರಾಘವೇಂದ್ರ ಆರೋಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಈಗಾಗಲೇ ಗವಟೂರು ಗ್ರಾಮದಲ್ಲಿ ಜಲಜೀವನ ಯೋಜನೆಯ ಫಲಾನುಭವಿಯೊಬ್ಬರು ಗ್ರಾಮ ಪಂಚಾಯ್ತಿ ಜಮಾಬಂಧಿ ಉಸ್ತುವಾರಿ ಅಧಿಕಾರಿಯಾಗಿ ಬಂದಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಿಗೆ ಭಾವಚಿತ್ರದೊಂದಿಗೆ ಪೈಪ್ನಲ್ಲಿ ಬರುತ್ತಿರುವ ನೀರಿನ ಪ್ರಮಾಣದ ಬಗ್ಗೆ ದೂರು ನೀಡುವುದರೊಂದಿಗೆ ಈ ಯೋಜನೆಯು ಅವೈಜ್ಞಾನಿಕವಾಗಿಯಿದೆ
ಎಂದು ಆರೋಪಿಸಿದಾಗ ತಕ್ಷಣ ಸ್ಪಂದಿಸಿದ ಜಿಲ್ಲಾ ಪಂಚಾಯ್ತಿ ಸಿಓ ಸ್ಥಳದಲ್ಲಿದ್ದ ಯೋಜನೆಯ ಇಂಜಿನಿಯರ್ರವರಿಗೆ ಖಡಕ್ ಎಚ್ಚರಿಕೆ ನೀಡಿ ದೂರು ಬರದಂತೆ ಕ್ರಮ ವಹಿಸುವಂತೆ ಸೂಚನೆ ನೀಡಲಾದರೂ ಕೂಡಾ ವಿದ್ಯಾನಗರದಲ್ಲಿ ಕಾಮಗಾರಿ ನಿರ್ಹಿಸುತ್ತಿರುವ ಗುತ್ತಿಗೆದಾರ ದರ್ಪದಿಂದ ಸಾರ್ವಜನಿಕರ ಮನವಿಗೆ ಸ್ಪಂದಿಸದೇ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕಾಮಗಾರಿ ಮಾಡುತ್ತಿರುವ ಜಾಗದಲ್ಲಿ ಪ್ರೌಢಶಾಲೆ ಕಾಲೇಜ್ ವಿದ್ಯಾರ್ಥಿಗಳು ಹಾಗೂ ಅಂಗನಾಡಿ ಮಕ್ಕಳು ಓಡಾಡುತ್ತಿದ್ದು ಪೈಪ್ಲೈನ್ ತೆಗೆಯಲಾಗಿರುವ ಹೊಂಡಕ್ಕೆ ಆಕಸ್ಮಿಕ ಜಾರಿಬಿದ್ದರೆ ಯಾರು ಹೊಣೆ ಇಂದ ಚಿಂತೆ ಕಾಡುವಂತಾಗಿದೆ.
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…