ಹೊಸನಗರ: ತಾಲೂಕಿನ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಜ.15ರಂದು ಮಕರ ಸಂಕ್ರಾಂತಿ ಹಬ್ಬದ ಜಾತ್ರೋತ್ಸವ ನಡೆಯಲಿದೆ ಎಂದು ಮೂಲಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿಯವರು ಹೇಳಿದರು.
ಅವರು ಪ್ರವಾಸಿ ಮಂದಿರಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಾತನಾಡಿ, ವರ್ಷದ ಮೊದಲ ಹಬ್ಬದ ಅಂಗವಾಗಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಠದ ಲಿಂಗೈಕ್ಯ ಸ್ವಾಮೀಜಿಗಳ ಗದ್ದುಗೆಯಲ್ಲಿ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಲ ಪೂಜೆ, ಚೌಡೇಶ್ವರಿ ದೇವಿಯ ಆರಾಧನೆ, ಭಕ್ತಾದಿಗಳಿಗೆ ದಾಸೋಹ ಏರ್ಪಡಿಲಾಗಿದೆ. ಬಳಿಕ ನಡೆಯುವ ಧರ್ಮಸಭೆಯಲ್ಲಿ ಆನಂದಪುರದ ಮುರುಘಾಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಿವಮೊಗ್ಗದ ಬಸವ ಕೇಂದ್ರದ ಶ್ರೀ ಹಾಗೂ ಅಕ್ಕಿ ಆಲೂರು ಮಠದ ಶ್ರೀ ಸಾನ್ನಿದ್ಯ ವಹಿಸಲಿರುವರು.
ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಪ್ರಮುಖರು ಆಗಮಿಸಲಿದ್ದಾರೆ. ಪ್ರತಿಭಾನ್ವಿತ ಕಲಾವಿಧರಿಂದ ಸಾಂಸ್ಕೃತಿಕ ಹಾಗೂ ಭಕ್ತಿನಮನ ಕಾರ್ಯಕ್ರಮಗಳು ಜರುಗಲಿವೆ ಎಂದ ಅವರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಪ್ರಮುಖರಾದ ಕೊಗಟಿ ರಾಜಶೇಖರಗೌಡ, ಸಂತೋಷ ಗೌಡ ಮತ್ತಿತರರು ಇದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…