ಟ್ರೀ ಪಾರ್ಕ್ನಲ್ಲಿ ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು !
ಶಿವಮೊಗ್ಗ: ಇಲ್ಲಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ನಲ್ಲಿ ಸಿಮೆಂಟ್ ಜಿಂಕೆ ಮೇಲೆ ಕುಳಿತಿದ್ದ ಗಾಂಧಿಬಜಾರಿನ ಹರೀಶ್ ಮತ್ತು ಲಕ್ಷ್ಮಿ ದಂಪತಿಗಳ ಆರು ವರ್ಷದ ಸಮೀಕ್ಷಾ ಎಂಬ ಬಾಲಕಿ ಸಿಮೆಂಟಿನ ಕಲಾಕೃತಿ ಮುರಿದು ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.
ಭಾನುವಾರ ರಜಾ ಇದ್ದ ಕಾರಣ ಬಾಲಕಿಯನ್ನು ಕುಟುಂಬಸ್ಥರು ಅಲ್ಲಿಗೆ ಕರೆದೊಯ್ದಿದ್ದರು. ಬಾಲಕಿ ಅಲ್ಲಿ ಆಟವಾಡುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿಮೆಂಟ್ನಲ್ಲಿ ಮಾಡಲಾಗಿದ್ದ ಕಲಾಕೃತಿ ಜಿಂಕೆಯ ಮೇಲೆ ಕೂರಿಸಿದ್ದರು. ಈ ವೇಳೆ ಕಲಾಕೃತಿ ಮುರಿದುಬಿದ್ದಿದೆ. ಪರಿಣಾಮ ಕೆಳಕ್ಕೆ ಬಿದ್ದ ಬಾಲಕಿಗೆ ಪೆಟ್ಟು ಬಿದ್ದಿದೆ.
ಘಟನೆಯಲ್ಲಿ ಮಗುವಿಗೆ ಪೆಟ್ಟು ಬಿದ್ದಾಗಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಮಗುವಿನ ತಾಯಿ ಹರಸಾಹಸ ಪಟ್ಟಿದ್ದು, ತಕ್ಷಣಕ್ಕೆ ನೆರವು ಸಹ ಸಿಗದೇ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಸದ್ಯ ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಾಗಿದೆ.