ಹೊಸನಗರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ)ಯ (DSS) ಹೊಸನಗರ (Hosanagara) ತಾಲೂಕು ಘಟಕದ ನೂತನ ಸಂಚಾಲಕರಾಗಿ ಎಂ. ಗುಡ್ಡೆಕೊಪ್ಪ ವಾಸಿ ಬಿ.ಎಂ. ಪ್ರಕಾಶ್ ಆಯ್ಕೆಯಾದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಘಟಕದ ಜಿಲ್ಲಾ ಸಂಚಾಲಕ ಕೆ.ವಿ. ನಾಗರಾಜ್ ಅರಳಸುರಳಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಪ್ರಕಾಶ್ ಸರ್ವಾನುಮತದಿಂದ ಆಯ್ಕೆಯಾದರು.
ಸಂಘಟನಾ ಸಂಚಾಲಕರಾಗಿ ಗಂಗನಕೊಪ್ಪ ವಾಸಿ ಎ. ಹರೀಶ್, ಜಯನಗರ ಗುರುಪ್ರಸಾದ್, ಮತ್ತಿಮನೆ ಎಂ. ಸಂದೇಶ್, ಖಜಾಂಚಿಯಾಗಿ ಸಂಪೇಕಟ್ಟೆ ಕೆ. ಪ್ರಭಾಕರ್, ಸಲಹಾ ಸಮಿತಿ ಸದಸ್ಯರಾಗಿ ಸಂಪೆಕಟ್ಟೆ ಸುಬ್ರಹ್ಮಣ್ಯ ಆಯ್ಕೆಯಾದರು.
ಈ ವೇಳೆ ಘಟಕದ ಜಿಲ್ಲಾ ಸಂಚಾಲಕ ಮಾತನಾಡಿ, ಇದೊಂದು ಜಾತ್ಯಾತೀತ ಸಂಘಟನೆ ಆಗಿದ್ದು, ಶೋಷಿತರ ಪರ ಧ್ವನಿಯಾಗುವ ಮೂಲಕ ಸೂಕ್ತ ನ್ಯಾಯಕ್ಕಾಗಿ ಶ್ರಮಿಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದ್ದು, ಗ್ರಾಮ ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ಘಟಕದ ಸಂಘಟನೆಗೆ ಹೊಸ ಆಯಾಮ ರೂಪಿಸುವ ಗುರುತರ ಜವಾಬ್ದಾರಿ ನೂತನ ಸಮಿತಿ ಮೇಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ರಾಜೇಂದ್ರ ಕನ್ನಂಗಿ, ನೆಲ್ಲಿಕಟ್ಟೆ ರಾಜು, ಅಣ್ಣಪ್ಪ ಕೆ.ಬಿ,ಅರಳಸುರಳಿ, ಅನಂತ ಕನ್ನಂಗಿ ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…