Categories: Shivamogga

ಡಿಕೆಶಿ ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಗುಡುಗಿದ ಕೆ.ಎಸ್. ಈಶ್ವರಪ್ಪ

– ನೀರು ಕಳ್ಳನನ್ನು ನೀರುಗಳ್ಳ ಎನ್ನದೇ ಏನೆನ್ನಬೇಕು…?

ಶಿವಮೊಗ್ಗ: ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ. ಅವರನ್ನು ತಕ್ಷಣವೇ ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರವಿದೆ. ಬರಗಾಲ ಕಾಲಿಟ್ಟಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಇಂಡಿಯಾ (ಐ.ಎನ್.ಡಿ.ಐ.ಎ.) ಮೈತ್ರಿಕೂಟಕ್ಕೆ, ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ತೃಪ್ತಿ ತರಿಸಲು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ನೀರು ಬಿಡುವ ಮುನ್ನ ಯಾರಿಗೂ ಹೇಳಲಿಲ್ಲ. ಸರ್ವ ಪಕ್ಷಗಳ ಸಭೆ ಕರೆಯಲಿಲ್ಲ. ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳಲಿಲ್ಲ. ತಾವೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಮೂರ್ಖತನದಿಂದ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ತಜ್ಞರ ಸಭೆ ಕರೆಯಬಹುದಿತ್ತು. ಸಂಸದರ ಸಭೆ ಕರೆಯಬಹುದಿತ್ತು. ಆದರೆ, ಯಾರನ್ನೂ ಕೇಳಲಿಲ್ಲ. ಸರ್ವಪಕ್ಷಗಳ ಸಭೆ ಕರೆದು ಚರ್ಚೆ ಮಾಡಬಹುದಿತ್ತು. ಆದರೆ, ಚರ್ಚಿಸಲಿಲ್ಲ. ದೆಹಲಿಗೆ ಹೋಗಿ ಸಂಸದರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ಎಂಪಿಗಳಿಂದ ಛೀಮಾರಿ ಹಾಕಿಸಿಕೊಂಡರು. ಈ ಎಲ್ಲಾ ಹಿನ್ನಲೆಯಲ್ಲಿ ಡಿ.ಕೆ. ಶಿವಕುಮಾರ್, ತಮ್ಮ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಇಂತಹುದೇ ಪರಿಸ್ಥಿತಿ ಉಂಟಾಗಿತ್ತು. ಆದರೆ, ಅವರು ಸಮರ್ಥವಾಗಿ ಪರಿಸ್ಥಿತಿ ಎದುರಿಸಿದರು. ಆಗ ಅವರಿಗೆ ಎಲ್ಲಾ ವಿಪಕ್ಷಗಳು ಬೆಂಬಲ ಕೊಟ್ಟಿದ್ದೆವು. ನಾವು ಕೂಡ ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೈಲಿಗೆ ಹೋದರೆ ನಾವು ಅವರ ಜೊತೆಗಿರುತ್ತೇವೆ ಎಂದರು.

ಕಾವೇರಿ ಎಂದರೆ ಕಾಂಗ್ರೆಸ್ ಪಕ್ಷದ ಸ್ವತ್ತಲ್ಲ, ಯಾವುದೇ ನಿರ್ಧಾರ ತೆಗೆದುಕೊಳ್ಳಲು ಡಿ.ಕೆ. ಶಿವಕುಮಾರ್ ಒಬ್ಬರೇ ಇಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ವಜಾ ಮಾಡಬೇಕು. ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಮುಂದಾಗಬೇಕು. ವಸ್ತುಸ್ಥಿತಿಯ ಅಧ್ಯಯನ ಮಾಡಿ ನೀರಾವರಿ ತಜ್ಞರ ಸಲಹೆ ಪಡೆದು ಅಗತ್ಯ ಕ್ರಮ ತೆಗೆದುಕೊಂಡು ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಶಿವಕುಮಾರ್, ಜ್ಞಾನೇಶ್ವರ್, ಶಿವರಾಜ್, ಜಗದೀಶ್, ವಿಶ್ವಾಸ್, ಅಣ್ಣಪ್ಪ, ಬಾಲು ಇದ್ದರು.

ಡಿ.ಕೆ. ಶಿವಕುಮಾರ್ ರಾತ್ರೋರಾತ್ರಿ ಕದ್ದು ನೀರು ಬಿಟ್ಟವರು. ಇಂತಹ ನೀರು ಕಳ್ಳನನ್ನು ಕಳ್ಳ ಎನ್ನದೇ ಬೇರೇನು ಹೇಳಬೇಕು. ಡಿಕೆಶಿ ಕಳ್ಳ ನೀರುಗಂಟಿ. ಅದಕ್ಕಾಗಿ ನಾನೇಕೆ ಅವರನ್ನು ಕ್ಷಮೆ ಕೇಳಬೇಕು.
– ಕೆ.ಎಸ್. ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಡಿ.ಕೆ. ಶಿವಕುಮಾರ್ ಸೆಟ್ಲ್ ಮೆಂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಯಾರು ಸೆಟ್ಲ್ ಮೆಂಟ್ ಮಾಡಲು. ನಾನೇ ಸೆಟ್ಲ್ ಮೆಂಟ್ ಮಾಡಬಲ್ಲೆ. ಅವರಿಗಿಂತ ಮೊದಲೇ ನಾನು ಡಿಸಿಎಂ ಆದವನು. ಗೂಂಡಾಗಳು ಬಳಸುವ ಭಾಷೆ ಇದು. ಅವರು ಜೈಲಿನಲ್ಲಿ ಇದ್ದು ಬಂದಿದ್ದನ್ನು ಮರೆತಿದ್ದಾರೆ. ಅಕ್ಷರಶಃ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ಕುಸಿದಿದೆ. ಗುಂಪುಗಾರಿಕೆ ಹೆಚ್ಚಾಗಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಮನೆಗಳಿಗೆ ಅರ್ಜಿ ಹಾಕಿದವರ ಗೋಳು ಹೇಳತೀರದಾಗಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಸಚಿವ ಈಶ್ವರಪ್ಪ ಅವರು ಗೋವಿಂದಾಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ಸುಮಾರು 4800 ಮನೆಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದರು. ಕೆಲಸವೂ ನಡೆಯುತ್ತಿತ್ತು. ಆದರೆ ಈಗ ಸಂಪೂರ್ಣವಾಗಿ ನಿಂತಿದೆ. ರಾಜ್ಯ ಸರ್ಕಾರ ಕೂಡಲೇ ಗಮನಹರಿಸಿ ಹಣ ಬಿಡುಗಡೆ ಮಾಡಿ ಬಡವರಿಗೆ ಸೂರು ನೀಡಬೇಕು. ಇಲ್ಲದಿದ್ದರೆ ಅ. 5 ರ ನಂತರ ಜಿಲ್ಲೆಯಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago