ಡಿ.10 ರಂದು ಬೆಂಗಳೂರಿನಲ್ಲಿ ಆರ್ಯ ಈಡಿಗರ ಸಮಾವೇಶ ; ನಿಟ್ಟೂರು ಶ್ರೀಗಳು

ಹೊಸನಗರ: ಕರ್ನಾಟಕ ರಾಜ್ಯದಲ್ಲಿ ಸುಮಾರು 40ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಆರ್ಯ ಈಡಿಗ ಜನಾಂಗ ನಮ್ಮಲ್ಲಿ ಹೊಂದಣಿಗೆ ಮನೋಭಾವ ಕಡಿಮೆ ಇರುವುದರಿಂದ ನಮ್ಮ ಈಡಿಗರ ಜನಾಂಗದಲ್ಲಿ ಒಟ್ಟು 26 ಒಳ ಪಂಗಡಗಳಿದ್ದು ಅವುಗಳನ್ನು ಒಂದು ಮಾಡುವ ದೃಷ್ಠಿಯಿಂದ ಡಿಸೆಂಬರ್ 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಬೃಹತ್ ಜಾಗೃತ ಸಮಾವೇಶ ಇಟ್ಟುಕೊಂಡಿದ್ದೇವೆ ಎಂದು ನಿಟ್ಟೂರು ರೇಣುಕಾನಂದ ಸ್ವಾಮೀಜಿಯವರು ಹೇಳಿದರು.

ಹೊಸನಗರದ ಆರ್ಯ ಈಡಿಗರ ಸಂಘದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆರ್ಯ ಈಡಿಗರ ಜನಾಂಗದಲ್ಲಿ ಬಡವರು ಹೆಚ್ಚಿನ ಪ್ರಮಾಣದಲ್ಲಿದ್ದು ಅವರಿಗೆ ಸರ್ಕಾರದಿಂದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ಜನಾಂಗದ ಜನಸಂಖ್ಯೆ 40 ಲಕ್ಷ ದಾಟಿದ್ದರೂ ಹೊಂದಣಿಕೆಯ ಕೊರತೆಯಿಂದ ಕರ್ನಾಟಕದಲ್ಲಿ ನಮಗೆ ಸರಿಯಾದ ಮಾನ್ಯತೆ ಸಿಗದಂತೆಯಾಗಿದೆ 40 ಲಕ್ಷ ಜನಸಂಖ್ಯೆ ಇದ್ದರೂ ಇಲ್ಲಿಯವರೆಗೆ ನಿಗಮ ಮಂಡಳಿ ನೀಡಿಲ್ಲ. ಸರ್ಕಾರ ತಕ್ಷಣ ನಿಗಮ ಮಂಡಳಿ ಸ್ಥಾಪಿಸಬೇಕು ಹಾಗೂ 500 ಕೋಟಿ ಹಣ ಇಡಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಸಿಗಂದೂರು ದೇವಸ್ಥಾನಕ್ಕೆ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ:
ದೇವಸ್ಥಾನಗಳಲ್ಲಿ ಶ್ರೇಷ್ಠವಾದ ನಮ್ಮ ಜನಾಂಗದವರು ಹೆಚ್ಚಿಗೆ ನಂಬಿಕೆ ಇಟ್ಟಿರುವ ಶ್ರೀ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ರಾಮಪ್ಪನವರು ಹೆಚ್ಚಿನ ವ್ಯವಸ್ಥೆಯೊಂದಿಗೆ ನಡೆಸಿಕೊಂಡು ಹೋಗುತ್ತಿದ್ದಾರೆ ಈ ದೇವಸ್ಥಾನಕ್ಕೆ ಸರ್ಕಾರ ಹಸ್ತಕ್ಷೇಪ ನಡೆಸುತ್ತಿದ್ದು ಸರ್ಕಾರ ಯಾವುದೇ ಹಸ್ತಕ್ಷೇಪ ನಡೆಸದಂತೆ ಸಮಾವೇಶದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಮುಳುಗಡೆ ಸಂತ್ರಸ್ಥರಿಗೆ ಭೂಮಿ ನೀಡುವಂತೆ ಒತ್ತಾಯ:
ಹೊಸನಗರ ತಾಲ್ಲೂಕು ಮುಳುಗಡೆ ಪ್ರದೇಶವಾಗಿದ್ದು ದೀಪದ ಕೆಳಗೆ ಕತ್ತಲೆಯಂಬಂತೆ ನೂರಾರು ವರ್ಷಗಳಿಂದ ಮುಳುಗಡೆ ಪ್ರದೇಶದ ರೈತರು ಸರ್ಕಾರಕ್ಕೆ ಸಾವಿರಾರು ಮನವಿ ಪತ್ರ ಸಲ್ಲಿಸಿದರೂ ಇಲ್ಲಯವರೆಗೆ ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ಸಿಗಲಿಲ್ಲ. ಈ ವಿಷಯವನ್ನು ಸಮಾವೇಶದಲ್ಲಿ ಪ್ರಾಸ್ತಾಪಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ನಮ್ಮ ಈಡಿಗರ ಸಮಾವೇಶವು 1995ರಲ್ಲಿ ನಡೆದಿದ್ದು ಇಲ್ಲಿಯವರೆಗೆ ಯಾವುದೇ ಸಮಾವೇಶ ನಡೆಸಲಿಲ್ಲ. ನಮ್ಮ ಜನಾಂಗವನ್ನು ಒಂದು ಮಾಡುವ ಪ್ರಯತ್ನ ನಡೆಸಿಲ್ಲ. ಒಂದು ಮಾಡುವ ಉದ್ದೇಶದಿಂದಲೇ ಈ ಸಮಾವೇಶ ನಡೆಸಲಾಗುತ್ತಿದ್ದು ಸುಮಾರು 4 ಲಕ್ಷ ಜನ ಸೇರಲಿದ್ದಾರೆ ಶಿವಮೊಗ್ಗ ಜಿಲ್ಲೆಯಿಂದ 500 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು ಹೊಸನಗರ ತಾಲ್ಲೂಕಿನಿಂದ 50 ಬಸ್‌ಗಳು ಹೋಗಲಿದೆ. ಹೊಸನಗರ ತಾಲ್ಲೂಕಿನ ಎಲ್ಲ ಈಡಿಗರ ಸಮುದಾಯಗಳು ಒಂದು ಗೂಡಿಸಿಕೊಂಡು ಈ ಸಮಾವೇಶಕ್ಕೆ ಆಗಮಿಸಿ ಈ ಬೃಹತ್ ಜಾಗೃತ ಸಮಾವೇಶವನ್ನು ಉಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಕೇಳಿಕೊಂಡರು.

ಈ ಪತ್ರಿಕಾಘೋಷ್ಠಿಯಲ್ಲಿ ಆರ್ಯ ಈಡಿಗರ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ, ಕಾರ್ಯದರ್ಶಿ ಲೇಖನಮೂರ್ತಿ, ನಿರ್ದೇಶಕರಾದ ಎರಗಿ ಉಮೇಶ್, ಮುರುಳಿ, ಟೀಕಪ್ಪ, ಗೋಪಾಲ್, ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 hour ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

9 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

9 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

11 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

21 hours ago