ಡಿ. 12ರಂದು ಗ್ರಾಮ ಸಹಾಯಕರ ಮುಷ್ಕರ ; ನಾಗಪ್ಪ

0 840

ಹೊಸನಗರ: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರು ಕಷ್ಟದಿಂದ ಜೀವನ ಸಾಗಿಸುತ್ತಿದ್ದು ಇಲ್ಲಿಯವರೆಗೆ ಸರ್ಕಾರಕ್ಕೆ ನೀಡಿರುವ ಮನವಿಗಳಿಗೆ ಸ್ವಂದಿಸಿಲ್ಲ ಎಂದು ಹೊಸನಗರ (Hosanagara) ತಾಲ್ಲೂಕು ಗ್ರಾಮ ಸಹಾಯಕ ಸಂಘದ ಅಧ್ಯಕ್ಷ ನಾಗಪ್ಪ ಸರ್ಕಾರದ ವಿರುದ್ಧ ದೂರಿದ್ದಾರೆ.

ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾವು ಡಿಸೆಂಬರ್ 12 ಮಂಗಳವಾರದಂದು ಬೆಳಗಾವಿ ಸುವರ್ಣಸೌಧದ ಎದುರು ಮುಷ್ಕರ ನಡೆಸಲು ನಮ್ಮ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘ ಕರೆ ನೀಡಿದ್ದು ಅದರಂತೆ ನಮ್ಮ ಬೇಡಿಕೆಗಳಾದ ಗ್ರಾಮ ಸಹಾಯಕರ ಸೇವೆ ಕಾರ್ಯಗೊಳಿಸುವುದು ರಾಜ್ಯ ಸರ್ಕಾರಿ ನೌಕರರ ಸ್ಥಾನಮಾನ ಹಾಗೂ ಇನ್ನಿತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೊಸನಗರ ತಾಲ್ಲೂಕಿನ ಎಲ್ಲ ಗ್ರಾಮ ಸಹಾಯಕರು ಈ ಪ್ರತಿಭಟನೆಗೆ ಆಗಮಿಸಿ ಈ ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಸಹಾಯಕ ಸಂಘದ ಮಾಜಿ ಅಧ್ಯಕ್ಷರಾದ ನಾಗರಾಜ್, ಕಾರ್ಯದರ್ಶಿ ಸುರೇಶ್, ಶಂಕರ ನಗರ, ರಾಘವೇಂದ್ರ ಹಾರೋಹಿತ್ತಲು, ರಾಘವೇಂದ್ರ ಹುಂಚ, ಅಶೋಕ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!