ಹೊಸನಗರ: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರು ಕಷ್ಟದಿಂದ ಜೀವನ ಸಾಗಿಸುತ್ತಿದ್ದು ಇಲ್ಲಿಯವರೆಗೆ ಸರ್ಕಾರಕ್ಕೆ ನೀಡಿರುವ ಮನವಿಗಳಿಗೆ ಸ್ವಂದಿಸಿಲ್ಲ ಎಂದು ಹೊಸನಗರ (Hosanagara) ತಾಲ್ಲೂಕು ಗ್ರಾಮ ಸಹಾಯಕ ಸಂಘದ ಅಧ್ಯಕ್ಷ ನಾಗಪ್ಪ ಸರ್ಕಾರದ ವಿರುದ್ಧ ದೂರಿದ್ದಾರೆ.
ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾವು ಡಿಸೆಂಬರ್ 12 ಮಂಗಳವಾರದಂದು ಬೆಳಗಾವಿ ಸುವರ್ಣಸೌಧದ ಎದುರು ಮುಷ್ಕರ ನಡೆಸಲು ನಮ್ಮ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘ ಕರೆ ನೀಡಿದ್ದು ಅದರಂತೆ ನಮ್ಮ ಬೇಡಿಕೆಗಳಾದ ಗ್ರಾಮ ಸಹಾಯಕರ ಸೇವೆ ಕಾರ್ಯಗೊಳಿಸುವುದು ರಾಜ್ಯ ಸರ್ಕಾರಿ ನೌಕರರ ಸ್ಥಾನಮಾನ ಹಾಗೂ ಇನ್ನಿತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೊಸನಗರ ತಾಲ್ಲೂಕಿನ ಎಲ್ಲ ಗ್ರಾಮ ಸಹಾಯಕರು ಈ ಪ್ರತಿಭಟನೆಗೆ ಆಗಮಿಸಿ ಈ ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಸಹಾಯಕ ಸಂಘದ ಮಾಜಿ ಅಧ್ಯಕ್ಷರಾದ ನಾಗರಾಜ್, ಕಾರ್ಯದರ್ಶಿ ಸುರೇಶ್, ಶಂಕರ ನಗರ, ರಾಘವೇಂದ್ರ ಹಾರೋಹಿತ್ತಲು, ರಾಘವೇಂದ್ರ ಹುಂಚ, ಅಶೋಕ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…