ಡಿ. 20ರ ಒಳಗೆ ಸಂಬಳ ನೀಡದಿದ್ದರೆ ಅನಿರ್ಧಿಷ್ಟಾವಧಿಗೆ ಮುಷ್ಕರ ; ಆರೋಗ್ಯ ಇಲಾಖೆಯ ಡಿ ಗ್ರೂಪ್ ಹಾಗೂ ನಾನ್‌ ಕ್ಲಿನಿಕ್ ಸಿಬ್ಬಂದಿಗಳ ಎಚ್ಚರಿಕೆ

ಹೊಸನಗರ: ತಾಲ್ಲೂಕಿನ ಕೆಲವು ಇಲಾಖೆಯಲ್ಲಿ ನಾನ್ ಕ್ಲಿನಿಕ್ ಡಿ ಗ್ರೂಪ್ ನೌಕರರಿಗೆ ಕಂದಾಯ ಇಲಾಖೆಯ ಅಟಲ್‌ಜೀ ಕೇಂದ್ರದ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಹೊಸನಗರ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಸುಮಾರು ನಾಲ್ಕು ತಿಂಗಳಿಂದ ಸಂಬಳ ನೀಡದೆ ಕಷ್ಟಕರ ರೀತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ಸಿಬ್ಬಂದಿಗಳ ಕಷ್ಟ ಜನಪ್ರತಿನಿಧಿಗಳಾಗಲಿ ಅಥವಾ ಕೆಲಸ ಮಾಡಿಸಿಕೊಳ್ಳುವ ಹಿರಿಯ ಅಧಿಕಾರಿಗಲಾಗಲಿ ಕೇಳುವಲ್ಲಿ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಕನಿಷ್ಟ ಆಹಾರ ಪದಾರ್ಥಗಳ ಬೆಲೆಗಳು ಹಾಗೂ ಜೀವನಕ್ಕೆ ಬೇಕಾಗಿರುವ ಅತ್ಯಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಈ ಕೆಲಸವನ್ನೇ ನಂಬಿಕೊಂಡ ಕುಟುಂಬಗಳು ಜೀವನ ನಿರ್ವಹಣೆ ಮಾಡಲು ಕಷ್ಟಕರವಾಗಿದೆ. ಕಛೇರಿಯ ಅಧಿಕಾರಿಗಳು ಕೆಲಸಕ್ಕೆ ಬರುವುದು ಒಂದು ನಿಮಿಷ ತಡವಾದರೂ ಗದರಿಸುವ ಅಧಿಕಾರಿಗಳು ಸಂಬಳದ ವಿಷಯದಲ್ಲಿ ತಮಗೇನು ಗೊತ್ತಿಲ್ಲದಂತೆ ಇರುವುದು ವಿಪರ್ಯಾಸ.

ಹೊಸನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 28 ಜನರು ಗ್ರೂಪ್ ಡಿ ಹಾಗೂ ನಾನ್‌ ಕ್ಲಿನಿಕ್ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಇವರು ಕಡು ಬಡವರಾಗಿದ್ದು ಒಂದು ಹೊತ್ತು ಊಟಕ್ಕಾಗಿ ಆರೋಗ್ಯ ಕೇಂದ್ರದ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಇಂಥವರಿಗೆ ಸುಮಾರು ನಾಲ್ಕು ತಿಂಗಳಿಂದ ಕೊಡುವ ಅಲ್ಪ-ಸ್ವಲ್ಪ ಸಂಬಳವನ್ನು ನೀಡದೆ ಜೀವನ ಹಾಗೂ ಕುಟುಂಬ ಕಷ್ಟಕರವಾಗಿ ಇವರು ಸಾಗಿಸುತ್ತಿದ್ದಾರೆ. ಇವರೆಲ್ಲರೂ ಸೇರಿ ಹೊಸನಗರ ತಹಶೀಲ್ದಾರ್ ರಶ್ಮಿಯವರಿಗೆ ಮನವಿ ಪತ್ರ ಸಲ್ಲಿಸಿ, ಡಿಸೆಂಬರ್ 20ರ ಒಳಗೆ ನಮಗೆ ಸಂಬಳ ನೀಡದಿದ್ದರೆ ಅನಿರ್ಧಿಷ್ಟಾ ಕಾಲ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸರ್ಕಾರಿ ನೌಕರರಿಗೆ ಲಕ್ಷಗಟ್ಟಲೆ ಸಂಬಳ ಸರಿಯಾದ ಸಮಯಕ್ಕೆ ನೀಡುವ ಈ ಸರ್ಕಾರ ಅಲ್ಪ-ಸ್ವಲ್ಪ ಸಂಬಳ ಪಡೆಯುವ ಇಂಥವರಿಗೆ ನಾಲ್ಕು ತಿಂಗಳಿಂದ ಸಂಬಳ ನೀಡಲು ಹಿಂದೆಟು ಹಾಕುತ್ತಿರುವುದು ಯಾಕೆ? ಎಂಬ ಪ್ರಶ್ನೆ ಪ್ರತಿಯೊಬ್ಬರಲ್ಲಿಯೂ ಕಾಡುತ್ತಿದೆ. ತಕ್ಷಣ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಇಲಾಖೆಯಲ್ಲಿ ದುಡಿಸಿಕೊಳ್ಳುತ್ತಿರುವ ಮೇಲಾಧಿಕಾರಿಗಳು ತುರ್ತು ಗಮನಹರಿಸಿ ಇವರಿಗೆ ತಕ್ಷಣ ಸಂಬಳ ನೀಡುವಲ್ಲಿ ಮುಂದಾಗುವರೇ ಕಾದುನೋಡಬೇಕಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

20 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago