Categories: Shivamogga

ತಂದೆ ಮೇಲಿನ ಪ್ರೀತಿಯಿಂದ ನಾಡಿನೆಲ್ಲೆಡೆ ನನಗೂ ಗೌರವ ಅಭಿನಂದನೆ ಸಿಗುತ್ತಿದೆ ; ಮಧು ಬಂಗಾರಪ್ಪ


ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಮೇಲಿನ ಪ್ರೀತಿಯಿಂದ ನಾಡಿನ ಎಲ್ಲೆಡೆ ನನಗೂ ಗೌರವ ಅಭಿನಂದನೆ ಸಿಗುತ್ತಿದೆ. ನನ್ನ ಎಲ್ಲಾ ಸನ್ಮಾನವನ್ನು ನನ್ನ ತಂದೆಯವರಿಗೆ ಅರ್ಪಣೆ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವರಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ  ಹೇಳಿದ್ದಾರೆ.


ಅವರು ಇಂದು ಜಿಲ್ಲಾ ವಕೀಲರ ಭವನದಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳಿಗೆ ಏರ್ಪಡಿಸಿದ ಅಭಿನಂದನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ತಂದೆಯವರ ಜನಪ್ರಿಯತೆ ಅವರ ಶಿಸ್ತು ಮತ್ತು ಜನ ಸಾಮಾನ್ಯರ ಬಗ್ಗೆ ಅವರಿಗೆ ಇರುವ ಕಾಳಜಿ ನನಗೆ ಅನೇಕ ಪಾಠ ಕಲಿಸಿದೆ. ಸಾಮಾನ್ಯವಾಗಿ ವಕೀಲರು ಹೆಚ್ಚಾಗಿ ರಾಜಕಾರಣಕ್ಕೆ ಬರುತ್ತಾರೆ. ಆದರೆ ಅವರ ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದಾರೆ ಅದರ ಮೇಲೆ ಜನಪ್ರಿಯತೆ ಹೆಚ್ಚುತ್ತಾ ಹೋಗುತ್ತದೆ. ನನಗೆ ಸೊರಬದ ಜನತೆ ಅಭೂತಪೂರ್ವ ಗೆಲುವು ನೀಡಿ, ಜನರ ಆರ್ಶೀವಾದದಿಂದ ಉತ್ತಮ ಖಾತೆ ಸಿಕ್ಕಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ಯೋಗ ಬಂದಿದೆ. ದೇವರಿಗೆ ದೀಪ ಹಚ್ಚುವುದು ಮತ್ತು ಓರ್ವ ವಿದ್ಯಾರ್ಥಿಗೆ ಶಿಕ್ಷಣ ನೀಡುವುದು ಎರಡು ಒಂದೇ ಎಂದು ನಾನು ಭಾವಿಸಿದ್ದೇನೆ. ಅತಿ ಹೆಚ್ಚು ಸರ್ಕಾರಿ ಶಾಲೆಯನ್ನು ತೆರೆದು ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ ನೀಡಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವುದು ನನ್ನ ಇಚ್ಛೆ. ಸರ್ಕಾರಿ ಶಾಲೆಗಳಿಗೆ ಬರುವ ಹಾಗೆ ನನ್ನ ಅವಧಿಯಲ್ಲಿ ಮಾಡುತ್ತೇನೆ ಎಂಬ ಭರವಸೆ ನೀಡಿದರು.


ಅವರ ಬಗ್ಗೆ ಪರಿಚಯ ಭಾಷಣದಲ್ಲಿ ಮಧುಬಂಗಾರಪ್ಪನವರ ವಿವರಣೆಯನ್ನು ನೀಡುತ್ತಿದ್ದ ವಕೀಲ ಲಕ್ಷ್ಮಿಕಾಂತ್ ಚಿಮಣ್ಣೂರ ಅವರನ್ನು ಉದ್ದೇಶಿಸಿ ನಿಮ್ಮ ಪರಿಚಯದಲ್ಲಿ ಹೇಳಿದ ಪ್ರಕಾರ ನಾನು ಪದವಿ ಪೂರ್ಣಗೊಳಿಸಿಲ್ಲ. ನಾನು ಓದಿದ್ದು ಕೇವಲ 12ನೇ ತರಗತಿ ಅದಕ್ಕೆ ನನಗೆ ಪ್ರೌಢಶಿಕ್ಷಣ ಖಾತೆ ನೀಡಿದ್ದಾರೆ. ಸತ್ಯವನ್ನು ಮರೆಮಾಚಬಾರದು ಎಂದು ಹೇಳಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.


ಇದೇ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಚೆನ್ನಬಸಪ್ಪ ನಮ್ಮ ಜಿಲ್ಲೆಯ ಅನೇಕ ಹಿರಿಯ ರಾಜಕಾರಣಿಗಳಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ನಡವಳಿಕೆ ಆದರ್ಶಪ್ರಾಯವಾಗಿದೆ. ಯಾವುದೇ ಪಕ್ಷ, ಜಾತಿ ಇರಲಿ ಅವರ ವರ್ತನೆಯಲ್ಲಿ ವ್ಯತ್ಯಾಸವಾಗುತ್ತಿರಲಿಲ್ಲ. ಎಲ್ಲರನ್ನೂ ಪ್ರೀತಿಯಿಂದ ಮಾತನಾಡಿಸಿ ತಮ್ಮಿಂದಾದ ನೆರವು ನೀಡುತ್ತಿದ್ದರು. ಅಭಿವೃದ್ಧಿಯಲ್ಲಿ ಕೂಡ ಎಂದು ರಾಜಕಾರಣ ಮಾಡಿಲ್ಲ. ವೈಚಾರಿಕ ಭಿನ್ನತೆ ಏನೇ ಇರಬಹುದು. ಶಿವಮೊಗ್ಗದ ಹಿರಿಯ ರಾಜಕಾರಣಿಗಳು ತಮ್ಮ ರಾಜಕಾರಣದಿಂದ ಸಂಬಂಧ ಕೆಡಿಸಿಕೊಂಡಿಲ್ಲ. ನಾವು ಕೂಡ ಹಿರಿಯ ರಾಜಕಾರಣಿಗಳ ಆದರ್ಶವನ್ನು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್‌ರವರನ್ನು ಕೂಡ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ಹಿರಿಯ ವಕೀಲರಾದ ಶ್ರೀಪಾಲ್, ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಕಲಗೋಡು ರತ್ನಾಕರ್, ಚಂದ್ರೇಗೌಡ, ವಕೀಲರ ಸಂಘದ ಪದಾಧಿಕಾರಿಗಳಾದ ವಿದ್ಯಾರಾಣಿ, ಚಂದ್ರಕುಮಾರ್, ಹಾಗೂ ಸಂಘದ ನಿರ್ದೇಶಕರುಗಳು, ವಕೀಲರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago