ರಿಪ್ಪನ್ಪೇಟೆ: ಇಲ್ಲಿನ ಶಿವಮೊಗ್ಗ ರಸ್ತೆಯ ಖಾಸಗಿ ಶ್ರೀನಂದಿ ಆಸ್ಪತ್ರೆಯ ಎದುರಿನಲ್ಲಿ ಅಪ್ರಾಪ್ತ ತನ್ನ ಹೆತ್ತ ಮಕ್ಕಳಿಗೆ ಭಿಕ್ಷಾಟನೆ ಮಾಡುವಂತೆ ಮಗನ ಕೈಗೆ ತಟ್ಟೆಕೊಟ್ಟು ಬಲವಂತದಿಂದ ಭಿಕ್ಷೆ ಬೇಡುವಂತೆ ತಾಯಿಯೆ ಅಣಿಗೊಳಿಸುತ್ತಿದ್ದನ್ನು ಸೂಕ್ಷ್ಮವಾಗಿ ಗಮನಿಸಿದ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ತಕ್ಷಣ ಠಾಣೆಗೆ ಮಾಹಿತಿ ನೀಡಿದ್ದಾರೆ.
ಭಿಕ್ಷಾಟನೆ ಮಾಡುವುದು ಅಕ್ಷಮ್ಯ ಅಪರಾಧ ಇನ್ನೂ ಮುಂದೆ ಹೀಗೆ ಮಾಡಿದರೆ ನಿಮ್ಮಗಳ ವಿರುದ್ದ ಕೇಸ್ ದಾಖಲಿಸಬೇಕಾಗುತ್ತದೆಂದು ಠಾಣಾಧಿಕಾರಿ ಪ್ರವೀಣ್ಕುಮಾರ್ ಎಸ್.ಪಿ. ಮಕ್ಕಳ ತಾಯಿಗೆ ಬುದ್ದಿ ಹೇಳಿದ ಪ್ರಸಂಗ ಇಂದು ನಡೆಯಿತು.
ಅಪ್ರಾಪ್ತ ಮಕ್ಕಳನ್ನು ಬೀದಿ ಮೇಲೆ ಭಿಕ್ಷೆ ಬೇಡಿಸಿ ಅದರಿಂದ ಬಂದ ಹಣದಿಂದ ತುತ್ತಿನ ಚೀಲ ತುಂಬಿಕೊಳ್ಳುತ್ತಿದ್ದ ತಾಯಿ, ಭಿಕ್ಷಾಟನೆ ಮಾಡಿಸುವುದು ತಪ್ಪು, ಇನ್ನೊಂದು ಸಾರಿ ಹೀಗೆ ನಿಮ್ಮ ಮಕ್ಕಳು ಭಿಕ್ಷೆ ಬೇಡುವುದನ್ನು ಕಂಡರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವುದಾಗಿ ತಾಯಿಗೆ ಎಚ್ಚರಿಕೆ ನೀಡಿ ಇಂದಿನಿಂದಲೇ ತಮ್ಮ ಮಗುವನ್ನು ಶಾಲೆಗೆ ಸೇರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ, ದೇವರಾಜ್, ಪರಶುರಾಮ, ಧರ್ಮರಾಜ್ ಮತ್ತು ಪೊಲಿಸ್ ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…