ತೀರ್ಥಹಳ್ಳಿಯಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿಗೆ ಹಾನಿ
ತೀರ್ಥಹಳ್ಳಿ : ಪಟ್ಟಣದಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗಾಂಧಿ ಚೌಕದ ಕಲ್ಲಾರೆ ಗಣಪತಿ ದೇವಸ್ಥಾನದ ಸಮೀಪದ ಹರೇ ರಾಮ ಹರೇ ಕೃಷ್ಣ ಗಿಫ್ಟ್ ಅಂಡ್ ಜ್ಯೂಸ್ ಸೆಂಟರ್ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು 3 ರಿಂದ 4 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ವಸ್ತುಗಳು ಹಾನಿಯಾಗಿವೆ.
ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ನಂತರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು ಪಕ್ಕದಲ್ಲಿ ಇದ್ದ ಅಂಗಡಿಯವರು ಹೊಗೆ ಬರುವುದನ್ನು ಗಮನಿಸಿ ಮಾಲೀಕರಿಗೆ ತಿಳಿಸಿದ್ದಾರೆ. ನಂತರ ಅಕ್ಕ ಪಕ್ಕದ ಸ್ಥಳೀಯರು ಹಾಗೂ ಅಗ್ನಿಶಾಮಾಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಕಳೆದ ವಾರದ ಹಿಂದಷ್ಟೇ ಆಗುಂಬೆ ಬಸ್ ನಿಲ್ದಾಣದ ಸಮೀಪದ ಕಂಡೀಲ್ ಮೋಟರ್ಸ್ ಬೈಕ್ ಶೋರೂಂನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರಡು ಬೈಕ್ಗಳು ಸುಟ್ಟು ಕರಕಲಾಗಿದ್ದು, 20ಕ್ಕೂ ಅಧಿಕ ಬೈಕ್ಗಳಿಗೆ ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು.