ಶಿವಮೊಗ್ಗ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಹೊರಡಿಸಿದೆ.
ಜಿಲ್ಲೆಯ ಭದ್ರಾವತಿ ಮತ್ತು ಹೊಸನಗರ ತಾಲ್ಲೂಕಿನಲ್ಲಿ ಚುನಾವಣೆ ನಡೆಯಲಿದೆ. ಫೆ.08 ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ. ಫೆ.14 ನಾಮಪತ್ರಗಳನ್ನು ಸಲ್ಲಿಸಲು ಕಡೆಯ ದಿನ. ಫೆ.15 ನಾಮಪತ್ರಗಳನ್ನು ಪರಿಶೀಲಿಸುವ ದಿನ. ಫೆ.17 ಉಮೇದುವಾರಿಕೆಗಳ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಫೆ.25 ಮತದಾನ ಅವಶ್ಯವಿದ್ದರೆ, ಮತದಾನ ನಡೆಸಬೇಕಾದ ದಿನ. ಫೆ.27 ಮರು ಮತದಾನದ ಅವಶ್ಯವಿದ್ದರೆ, ಮತದಾನ ನಡೆಸಬೇಕಾದ ದಿನ. ಫೆ.28 ಮತಗಳ ಎಣಿಕೆ ದಿನ ಮತ್ತು ಚುನಾವಣೆ ಮುಕ್ತಾಯ ದಿನ.
ಭದ್ರಾವತಿ ತಾಲ್ಲೂಕಿನ ಯಡೇಹಳ್ಳಿ ಗ್ರಾ.ಪಂ ಯ ಚಂದನಕರೆ(ಸಾಮಾನ್ಯ) 01 ಸ್ಥಾನ, ನಾಮಪತ್ರಗಳನ್ನು ಯಡೇಹಳ್ಳಿ ಗ್ರಾ.ಪಂ ಯಲ್ಲಿ ಸಲ್ಲಿಸಬೇಕು. ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾ.ಪಂ ಯ ತಳಲೆ(ಹಿಂದುಳಿದ ‘ಅ’ವರ್ಗ) 01 ಸ್ಥಾನ ನಾಮಪತ್ರಗಳನ್ನು ಹೆದ್ದಾರಿಪುರ ಗ್ರಾ.ಪಂ ಯಲ್ಲಿ ಸಲ್ಲಿಸಬೇಕು. ನಾಗೋಡಿ(ನಿಟ್ಟೂರು) ಗ್ರಾ.ಪಂ ಯ ಕೋಟೆಶಿರೂರು(ಸಾಮಾನ್ಯ ಮಹಿಳೆ) 01 ಸ್ಥಾನ ಮತ್ತು ಹೆಬ್ಬಿಗೆ(ಸಾಮಾನ್ಯ) 01 ಸ್ಥಾನ ನಾಗೋಡಿ(ನಿಟ್ಟೂರು) ಇಲ್ಲಿ ನಾಮಪತ್ರಗಳನ್ನು ಸಲ್ಲಿಸಬೇಕು.
ದಿನಾಂಕ: 08-02-2023 ರಿಂದ 28-02-2023 ರವರೆಗೆ ಚುನಾವಣೆ ನಡೆಯುವ ಗ್ರಾ.ಪಂ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಸದರಿ ಪ್ರದೇಶಗಳಲ್ಲಿ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮುಚ್ಚತಕ್ಕದ್ದು ಹಾಗೂ ಮಹರು ಮಾಡಿದ ಕೀಯನ್ನು ತಾಲ್ಲೂಕು ತಹಶೀಲ್ದಾರರಿಗೆ ಒಪ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶಿಸಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…