ದೆಹಲಿ ಚಲೋ ಬೆಂಬಲಿಸಿ ಯುವ ಕಾಂಗ್ರೆಸ್‌ನಿಂದ ಸಂಸದ ಬಿವೈಆರ್ ಮನೆಗೆ ಮುತ್ತಿಗೆ ಯತ್ನ, ಪೊಲೀಸರ ವಶಕ್ಕೆ

0 218

ಶಿವಮೊಗ್ಗ : ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಲ್ಲಾ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ದೆಹಲಿ ಚಲೋ ಬೆಂಬಲಿಸಿ ಇಂದು ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕೇಂದ್ರ ಬಿಜೆಪಿ ಸರ್ಕಾರವು 2017 – 18 ರಿಂದ ಇಲ್ಲಿಯವರೆಗೆ ಕರ್ನಾಟಕ ರಾಜ್ಯಕ್ಕೆ ಜಿ.ಎಸ್.ಟಿಯ ಪರಿಹಾರದ ನಿಧಿಯಾದ 1,87,000 ಕೋಟಿಗೊಳಷ್ಟು‌ ಹಣವನ್ನು ನೀಡದೆ ಅನ್ಯಾಯ ಮಾಡಿ ಈ ವರ್ಷ ಇಡೀ‌ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಅನ್ನು ಕಟ್ಟುವ ರಾಜ್ಯ ಎಂದರೆ ಅದು ಕರ್ನಾಟಕ ಕರ್ನಾಟಕ ರಾಜ್ಯದಿಂದ‌ ಗೆದ್ದು ಹೋದ ಬಿಜೆಪಿ 25 ಸಂಸದರು ಸಂಸತ್ ನಲ್ಲಿ ತುಟಿ ಬಿಚ್ಚದೆ ರಾಜ್ಯಕ್ಕೆ ಬರಬೇಕಾದ‌ ಪರಿಹಾರ ಹಾಗೂ ರೈತರ ಬರ ಪರಿಹಾರ, ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಲವಾರು ಯೋಜನೆಗಳ ಪಾಲನ್ನು ಕೇಳದೆ ಅಸಮರ್ಥ ತುಟಿ ಬಿಚ್ಚಿದ ಸಂಸದರಾಗಿದ್ದಾರೆ ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯಕೊಡಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಪ್ರಮುಖರಾದ ಬಿ. ಲೋಕೇಶ್ ಮತ್ತಿತರರಿದ್ದರು.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/p/D2cmYSJVzdcsWzUx/?mibextid=qi2Omg

Leave A Reply

Your email address will not be published.

error: Content is protected !!