ದೇಶದ ಕಾನೂನು ಪಾಲನೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ; ನ್ಯಾಯಾಧೀಶ ರವಿಕುಮಾರ್ ಕೆ

ಹೊಸನಗರ : ಕಾನೂನುಗಳು ದೇಶ ಹಾಗೂ ಪ್ರಜೆಗಳ ಹಿತಕ್ಕಾಗಿ ರಚನೆಯಾಗಿವೆ. ಅವುಗಳನ್ನು ಪಾಲಿಸುವುದು ಹಾಗೂ ಕಾಲಕಾಲಕ್ಕೆ ಬದಲಾಗುವ ನಿಯಮಗಳನ್ನು ಅನುಸರಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ವ್ಯವಹಾರ ನ್ಯಾಯಾಧೀಶ ರವಿಕುಮಾರ್ ಕೆ ಹೇಳಿದರು.


ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಮಲೆನಾಡು ಪ್ರೌಡ ಶಾಲೆಯ ಆವರಣದಲ್ಲಿ ರಾಷ್ಟ್ರೀಯ ಕಾನೂನು ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ನೆರವು ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳು ಏರ್ಪಡಿಸಿದ್ದ ಕಾನೂನು ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ದೇಶದ ನ್ಯಾಯ ವ್ಯವಸ್ಥೆಯನ್ನು ಗೌರವದಿಂದ ಕಾಣಬೇಕು. ನ್ಯಾಯಾಂಗ ಎನ್ನುವುದು ಸರಕಾರಿ ಕಛೇರಿಯಲ್ಲ. ಸಂವಿಧಾನದ ಅಡಿಯಲ್ಲಿ ಸ್ವತಂತ್ರವಾಗಿ ಕಾರ‍್ಯನಿರ್ವಹಿಸುವ ಸಂಸ್ಥೆಯಾಗಿದೆ. ಪ್ರತಿಯೊಬ್ಬರೂ ಕಾನೂನಿನ ಅರಿವು ಹೊಂದಿರಬೇಕು. ತಂತ್ರಜ್ಞಾನ ಬದಲಾದಂತೆ ಹಲವು ಸವಾಲುಗಳು ಎದುರಾಗುತ್ತಿವೆ. ಇದಕ್ಕೆ ತಕ್ಕಂತೆ ಕಾನೂನುಗಳಲ್ಲಿಯೂ ಮಾರ್ಪಾಡುಗಳಾಗಿವೆ. ಹೊಸ ಕಾನೂನುಗಳು ಜಾರಿಗೆ ಬರುತ್ತಿವೆ. ಪ್ರತಿಯೊಬ್ಬ ಪ್ರಜೆಯೂ ಶಾಂತಿ ಸಹಬಾಳ್ವೆಯ ಜೀವನ ಸಾಗಿಸಬೇಕೆನ್ನುವುದು ದೇಶದ ಸಂವಿಧಾನದ ಆಶಯವಾಗಿದೆ ಎಂದರು.


ಕಾನೂನು ಇರುವವರೆಗೆ ಅದರ ಪಾಲನೆ ಅನಿವಾರ್ಯ ಎಂದ ಅವರು, ನಮ್ಮ ಚಿಂತನೆ, ಆಲೋಚನೆ ಪ್ರತಿಕ್ರಿಯೆಗಳು ಕಾಯ್ದೆಯ ಪರಿಪಾಲನೆಯ ಜೊತೆಗೆ ಇರಬೇಕು, ಕಾನೂನು ಎಂಬುದು ಒಂದು ವ್ಯವಸ್ಥೆಯಾಗಿದ್ದು ಅದು ಸಮಾಜಕ್ಕೆ ಪೂರಕವಾಗಿರಬೇಕು, ಜನರ ಭಾವನೆಗಳು ಬಹುಮುಖವಾಗಿದ್ದಾಗ ಕಾನೂನಿನ ಅಗತ್ಯತೆ ಉಂಟಾಗುತ್ತದೆ. ಕಾನೂನು ಹಾಗೂ ಧರ್ಮ ಪರಿಪಾಲನೆ ನಿಂತ ನೀರಲ್ಲ ಕಾನೂನು ಬಿಟ್ಟು ಸಮಾಜವಿರಲು ಸಾಧ್ಯವಿಲ್ಲ ಸಮಾಜಕ್ಕೆ ಕಾನೂನಿನ ನೆಲೆಯ ಅಗತ್ಯ ಹಾಗೂ ಅನಿವಾರ್ಯತೆ ಇದೆ. ಮಹಿಳೆಯರು ಮಕ್ಕಳು ನೊಂದವರು ದೌರ್ಜನ್ಯಕ್ಕೆ ಒಳಗಾದ ಅನೇಕ ಅಸಹಾಯಕರಿಗೆ ಉಚಿತ ಕಾನೂನು ನೆರವು ನೀಡುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದರು.


ಕಾಲೇಜು ಪ್ರಾಚಾರ್ಯ ಸ್ವಾಮಿರಾವ್ ಮಾತನಾಡಿ, ಕಾನೂನಿನ ಕುರಿತು ವಿದ್ಯಾರ್ಥಿಗಳು ಸೂಕ್ತ ಅರಿವು ಹೊಂದಿರಬೇಕು. ಯುವಜನತೆಯಿಂದಲೇ ಕಾನೂನು ಉಲ್ಲಂಘನೆಯ ಪ್ರಕರಣಗಳು ಹೆಚ್ಚುತ್ತಿರುವುದು ಆಘಾತಕಾರಿ ಎಂದರು.
ಪೊಲೀಸ್ ಸಿಬ್ಬಂದಿ ಹಾಲೇಶಪ್ಪ, ಮಾಹಿತಿ ತಂತ್ರಜ್ಞಾನದ ಕುರಿತು ಮತ್ತು ವಕೀಲರ ಸಂಘದ ಅಧ್ಯಕ್ಷರಾದ ವಾಲೆಮನೆ ಶಿವಕುಮಾರ್ ಕಾನೂನಿನ ಅರಿವು ಬಗ್ಗೆ ಉಪನ್ಯಾಸ ನೀಡಿದರು.


ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್, ಉಪನ್ಯಾಸಕರಾದ ದಾಮೋದರ ಶೆಣೈ, ಮಾಹಾಂತೇಶ್, ಸೀಮಾ, ಗಣೇಶ್, ನ್ಯಾಯಾಲಯದ ಸಿಬ್ಬಂದಿ ರೇಖಾ ಹರೀಶ್ ಲೋಕ ಅದಾಲತ್ ಗುರುರಾಜ್ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

23 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago