ಶಿವಮೊಗ್ಗ : ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಬಿಗಿ ಭದ್ರತೆಯಲ್ಲಿ ಇಂದು ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೀರ್ಥಹಳ್ಳಿ ಠಾಣೆ ಇನ್ಸ್ಪೆಕ್ಟರ್ ಅಶ್ವಥ್ ಗೌಡ ನೇತೃತ್ವದಲ್ಲಿ ಕೋರ್ಟ್ಗೆ ಹಾಜರುಪಡಿಸಿದರು.
ಮಾವೋವಾದಿ ನಕ್ಸಲ್ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾಕೇತ್ ರಾಜನ್ ಸಾವಿನ ಬಳಿಕ ರಾಜ್ಯದಲ್ಲಿ ನಕ್ಸಲ್ ಹೋರಾಟವನ್ನು ಮುನ್ನಡೆಸಿದ್ದರು ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಹಾಗೂ ಆಗುಂಬೆ ಠಾಣೆಯ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ ಆರೋಪಿಯಾಗಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ನಿವಾಸಿ ಬಿ.ಜಿ.ಕೃಷ್ಣಮೂರ್ತಿ 2021ರ ನವೆಂಬರ್ನಲ್ಲಿ ಕೇರಳ ಪೊಲೀಸರಿಂದ ಬಂಧಿತರಾಗಿದ್ದರು.
ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಾಡಿ ವಾರೆಂಟ್ ಮೇಲೆ ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…