ನಕ್ಸಲ್ ಶ್ರೀಮತಿ ತೀರ್ಥಹಳ್ಳಿ ಕೋರ್ಟ್‌ಗೆ ಕರೆ ತಂದ ಪೊಲೀಸರು

ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು ನಕ್ಸಲ್ ಹೋರಾಟದ ಕೇಸ್ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ನಕ್ಸಲ್ ನಾಯಕ ಬಿ.ಜಿ‌. ಕೃಷ್ಣಮೂರ್ತಿ ಯವರನ್ನ ಕಳೆದ ತಿಂಗಳು ಕೋರ್ಟ್‌ಗೆ ಹಾಜರುಪಡಿಸಿದ್ದ ಬೆನ್ನಲ್ಲೇ ಇದೀಗ ಮತ್ತೋರ್ವ ನಕ್ಸಲ್ ನಾಯಕಿ ತೀರ್ಥಹಳ್ಳಿ ಪೊಲೀಸರ ವಶಕ್ಕೆ ಪಡೆದು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

ನಕ್ಸಲ್ ಶೃಂಗೇರಿಯ ಶ್ರೀಮತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಬೆಳಿಗ್ಗೆ 10:30 ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ಆಗುಂಬೆ ಠಾಣೆ ಕೇಸ್ ಸಂಬಂಧ ಕೋರ್ಟ್‌ಗೆ ಹಾಜರುಪಡಿಸಿದ್ದು ನಕ್ಸಲ್ ಶ್ರೀಮತಿಯನ್ನು ಬಾಡಿ ವಾರೆಂಟ್ ಮೇಲೆ ಕರತರಲಾಗಿದೆ.

ಹೈ ಸೆಕ್ಯೂರಿಟಿ ಮೂಲಕ‌ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತಂದು ಈಗ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ನಕ್ಸಲ್ ಪ್ರಕರಣದ ಆರೋಪಿಯಾಗಿರುವ ಶ್ರೀಮತಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತಾರಳ್ಳಿಕೊಡಿಗೆ ಗ್ರಾಮದವರು.

ನಕ್ಸಲ್ ಹೋರಾಟದಲ್ಲಿ ಬಿ.ಜಿ. ಕೃಷ್ಣಮೂರ್ತಿ ಜೊತೆ ಗುರುತಿಸಿಕೊಂಡಿದ್ದ ಶೃಂಗೇರಿಯ ಶ್ರೀಮತಿಯನ್ನು 2023ರ ನ. 7 ರಂದು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದರು. ವಿಚಾರಣೆ ಬಳಿಕ ತ್ರಿಶೂರ್ ಜೈಲಿನಲ್ಲಿ ಶ್ರೀಮತಿಯವರನ್ನ ಇರಿಸಲಾಗಿತ್ತು.

ಕರಪತ್ರ ಹಂಚಿಕೆ, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯಕ್ಕೆ ಕ್ಕೆ ಸಂಚು ರೂಪಿಸಿದ ಆರೋಪದಲ್ಲಿದ್ದ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ಶ್ರೀಮತಿಗೆ ಎನ್.ಆರ್.ಪುರ ನ್ಯಾಯಾಲಯದಿಂದ ಇತ್ತೀಚೆಗೆ 14 ದಿನಗಳ ನ್ಯಾಯಾಂಗ ಬಂಧನ ಸಹ ವಿಧಿಸಲಾಗಿತ್ತು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

1 hour ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

2 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

2 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

3 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

4 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

8 hours ago