ನರೇಂದ್ರ ಮೋದಿ ಮತ್ತು ಹಿಂದುಳಿದ ವರ್ಗಕ್ಕೆ ರಾಹುಲ್ ಗಾಂಧಿ ಟೀಕೆ, ಹೊಸನಗರದಲ್ಲಿ ಓಬಿಸಿಯಿಂದ ಪ್ರತಿಭಟನೆ ಮನವಿ ಸಲ್ಲಿಕೆ

ಹೊಸನಗರ: ಪ್ರಧಾನಿ ನರೇಂದ್ರ ಮೋದಿಯವರು ಓಬಿಸಿ ಪಟ್ಟಿಯಲ್ಲಿಲ್ಲ ಎಂದು ಅವಮಾನಿಸುವ ಭರದಲ್ಲಿ ಹಿಂದುಳಿದ ವರ್ಗಕ್ಕೆ ಅವಮಾನಿಸಿದ್ದಾರೆ ಇವರು ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಗೂ ಹಿಂದುಳಿದ ವರ್ಗದವರ ಬಳಿ ಕ್ಷಮೆಯಾಚಿಸಬೇಕು ಮತ್ತು ಇವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಿ ಸೂಕ್ತ ಶಿಕ್ಷೆ ಜಾರಿ ಮಾಡಬೇಕೆಂದು ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್.ಸುಧಾಕರ್‌ರವರ ನೇತೃತ್ವದಲ್ಲಿ ಹೊಸನಗರ ತಾಲ್ಲೂಕು ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ರಶ್ಮಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್.ಸುಧಾಕರ್‌, ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಇಲ್ಲವಾದರೇ ನಮ್ಮ ಹೋರಾಟ ನಿರಂತರವಾಗಿರುತ್ತದೆ ರಾಹುಲ್ ಗಾಂದಿಹಯವರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಆದರೆ, ಹಿಂದುಳಿದ ವರ್ಗ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕರ್ನಾಟಕದಲ್ಲಿ ಗಾಣಿಗ ಸಮಾಜ ಹಿಂದುಳಿದ ವರ್ಗಕ್ಕೆ ಸೇರಿಲ್ಲ ಎಂಬ ಅರ್ಥಹೀನ ಹೇಳಿಕೆ ನೀಡಿದ್ದಾರೆ ತೇಲಿ ಸಮಾಜ ಎಂದರೇ ಕರ್ನಾಟಕದಲ್ಲಿ ಗಾಣಿಗ ಸಮಾಜ ಎಂಬ ಅರ್ಥ ಈ ಸಮಾಜ ಬಹಳ ಹಿಂದುಳಿದ ಸಮಾಜವಾಗಿದೆ ಇಂಥಹ ಸಮಾಜದಿಂದ ಬಂದಂತಹ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂಬುವುದು ಹೆಮ್ಮೆಪಡುವ ವಿಷಯ. ಆದರೆ, ರಾಹುಲ್ ಅವರು ಇದನ್ನು ತಿಳಿಯದೇ ಅವಹೇಳನ ಮಾಡಿದ್ದಾರೆ ಎಂದು ದೂರಿದರು.

ರಾಹುಲ್ ಗಾಂಧಿ ಮೋದಿಯವರನ್ನು ದೂರುವುದರಿಂದ ಕೇಂದ್ರದಲ್ಲಿ ಸಂಖ್ಯಾಬಲ ದ್ವಿಗುಣವಾಗುತ್ತದೆ ಕೆ.ಎಸ್ ಪ್ರಶಾಂತ್
ರಾಹುಲ್ ಗಾಂಧಿಯವರು ಬಿಜೆಪಿ ಪಕ್ಷ ಹಾಗೂ ನರೇಂದ್ರ ಮೋದಿಯವರನ್ನು ಪ್ರತಿ ಬಾರಿಯು ದೂರುತ್ತಿದ್ದು ಇವರು ದೂರಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಲ್ಲಿ ಸಂಸದರ ಸಂಖ್ಯಾಬಲ ಹೆಚ್ಚುತ್ತಾ ಸಾಗುತ್ತಿದೆ. ರಾಹುಲ್ ಗಾಂಧಿ ನರೇಂದ್ರ ಮೋದಿಯವರನ್ನು ಬಿಜೆಪಿ ಪಕ್ಷವನ್ನು ದೂರುತ್ತಾ ಸಾಗಲಿ ಆದರೇ ಹಿಂದುಳಿದ ವರ್ಗದವರನ್ನು ದೂರಿರುವ ಬಗ್ಗೆ ನಾವು ಹೋರಾಟ ನಡೆಸುವುದು ಅನಿವಾರ್ಯ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಪ್ರಭಾರಿ ಕೆ.ಎಸ್ ಪ್ರಶಾಂತ್‌ರವರು ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಎನ್.ಆರ್. ದೇವಾನಂದ್, ಗಣಪತಿ ಬಿಳಗೋಡು ಎ.ವಿ ಮಲ್ಲಿಕಾರ್ಜನ್‌ರವರು ರಾಹುಲ್ ಗಾಂಧಿಯ ವಿರುದ್ಧ ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷರುಗಳಾದ ಶಿವಮೊಗ್ಗ ಪ್ರದೀಪ್, ಶಿಕಾರಿಪುರ ಲಕ್ಷ್ಮಣ ಕೆ.ಹೆಚ್, ರೂಪಾ ಮಾಲತೇಶ್, ಶಿವಮೊಗ್ಗ ವಿಶ್ವನಾಥ್ ಯು.ಹೆಚ್, ಕೆ.ಎನ್ ವಿಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮೇಘರಾಜ್, ಗಾಜನೂರು ಗಿರಿರಾಜ್, ಹೊಸನಗರದ ಓಬಿಸಿ ವರ್ಗದ ಮಂಜುನಾಥ್ ಸಂಜೀವಣ್ಣ, ಸತ್ಯನಾರಾಯಣ ವಿ, ಪಟ್ಟಣ ಪಂಚಾಯತಿ ಸದಸ್ಯ ಗುರುರಾಜ್ ಆರ್, ವಿಜಯಕುಮಾರ್, ನೇರಲೆ ರಮೇಶ್, ಕೃಷ್ಣಮೂರ್ತಿ, ಮಂಡಾನಿ ಮೋಹನ್, ಜಿಲ್ಲಾ ಓಬಿಸಿ ಕಾರ್ಯದರ್ಶಿ ಸತೀಶ ಕಾಲಸಸಿ, ಗುಲಾಬಿ ಮರಿಯಪ್ಪ, ರಾಜಶೇಖರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

7 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

11 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

13 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

14 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

21 hours ago