ನವಧಾನ್ಯ-ಸಿರಿಧಾನ್ಯಗಳ ಸಹಿತ 108 ಅರ್ಘ್ಯ ಸಮರ್ಪಣೆ | ಜೀವದಯಾ ಮನೋಧರ್ಮವು ಶ್ರೇಷ್ಠ ವ್ರತ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ: ಪರಸ್ಪರ ಪ್ರೀತಿ ವಾತ್ಸಲ್ಯದಿಂದ ಅನ್ಯೋನ್ಯ ಸಂಬಂಧಗಳಿಂದ ಜೀವನ ನಿರ್ವಹಣೆಯಲ್ಲಿ ವಿಘ್ನಗಳು, ಸಂಘರ್ಷಗಳು ಬರಲಾರವು. ಯಾವುದೇ ಪ್ರಾಣಿ-ಸಸ್ಯ ಜೀವಿಗೂ ನೋವುಂಟು ಮಾಡಬಾರದೆಂಬ ಜೈನ ಧರ್ಮದ ತತ್ವಗಳು ಮಾನವಕಲ್ಯಾಣ ಬಯಸುತ್ತದೆ ಎಂದು ಹೊಂಬುಜ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ನವರಾತ್ರಿಯ ಎಂಟನೇ ದಿನದಂದು ಜೀವದಯಾಷ್ಟಮಿ ಆಚರಣೆ ಸಂದರ್ಭದಲ್ಲಿ ಪ್ರವಚನದಲ್ಲಿ ತಿಳಿಸಿದರು.

ಇತತರನ್ನು ಸಹೋದರ-ಸಹೋದರಿಯರಂತೆ ಗೌರವಿಸಬೇಕು. ಪ್ರಕೃತಿಯ ಸಸ್ಯ-ಪ್ರಾಣಿ ಜೀವರಾಶಿಗಳನ್ನು ಪೋಷಿಸುವ ಮೂಲಕ ನಿರ್ಮಲ ಮನಸ್ಸಿನ ಜೀವನವು ಸಹಬಾಳ್ವೆಯ ಫಲಶ್ರುತಿ ಶ್ರೇಷ್ಠವಾದುದೆಂದು ಹರಸಿದರು. ಸಿರಿಧಾನ್ಯಗಳ ಸಹಿತ ನವಧಾನ್ಯ, ಅಕ್ಕಿಮುಡಿ, ಬೇಳೆಗಳ ಸಮರ್ಪಣೆ ಮಾಡಲಾಯಿತು.


ಶ್ರೀಕ್ಷೇತ್ರದ ಶ್ರೀ ಪಾರ್ಶ್ವನಾಥ ಸ್ವಾಮಿ, ಅಧಿದೇವತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಅಷ್ಟವಿಧಾರ್ಚನೆ, ವಿಶೇಷ ಆರಾಧನಾ ಪೂಜೆ ನೆರವೇರಿತು. ಪ್ರಾತಃಕಾಲ ಐಶ್ವರ್ಯ ಆನೆಯೊಂದಿಗೆ ಅಗ್ರೋದಕವನ್ನು ಕುಮದ್ವತಿ ತೀರ್ಥದಿಂದ ವಾದ್ಯಗೋಷ್ಠಿಯೊಂದಿಗೆ ತರಲಾಯಿತು.


ಸೇವಾಕರ್ತೃರಾದ ಮುಂಬೈನ ಶ್ರೀ ರಾಜೀವ್-ಸಚಿನ್ ಜೈನ್ ಹಾಗೂ ಶ್ರೀ ದಿಲೀಪ್ ಗೆವಾರೆ ಮತ್ತು ಕುಟುಂಬದವರನ್ನು ಪೂಜ್ಯ ಶ್ರೀಗಳವರು ಗೌರವಿಸಿ ಹರಸಿದರು. ರಾತ್ರಿ ಸಂಗೀತ, ಭಜನೆ, ಸಾಮೂಹಿಕ ಜಿನನಾಮ ಸ್ತುತಿಯೊಂದಿಗೆ ಸ್ವಸ್ತಿಶ್ರೀಗಳ ಪಾವನ ಸಾನಿಧ್ಯದಲ್ಲಿ ಭಕ್ತವೃಂದದವರು ಜೀವದಯಾಷ್ಟಮಿ ಪರ್ವದಲ್ಲಿ ಭಾಗಿಯಾದರು. ಪುರೋಹಿತ ಶ್ರೀ ಪದ್ಮರಾಜ ಇಂದ್ರರವರು ಪೂಜಾ ವಿಧಿ ನೆರವೇರಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago