ಶಿಕಾರಿಪುರ : ಇಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣ ಸಮೀಪ ನಿಗೂಢ ವಸ್ತು ಸ್ಫೋಟವಾಗಿದೆ.
ಬಸ್ ನಿಲ್ದಾಣ ಬಳಿ ರಸ್ತೆಯ ಫುಟ್ಪಾತ್ ನಲ್ಲಿ ನಿಗೂಢ ವಸ್ತು ಸ್ಫೋಟವಾಗಿದ್ದು, ಇಬ್ಬರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಕೂಡಲೇ ಗಾಯಾಳುಗಳನ್ನು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಯಾಗ್ ನಲ್ಲಿದ್ದ ವಸ್ತು ಏಕಾಏಕಿ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿ ಕೆಲ ಸಮಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಶಿರಾಳಕೊಪ್ಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಂದಿ ಶಿಕಾರಿಗೆ ಬಳಸುವ ನಾಡಾ ಬಾಂಬ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಹಾವೇರಿ ಜಿಲ್ಲೆಯ ಕೊಪ್ಪರಸಿಕೊಪ್ಪ ಗ್ರಾಮದ ಉಮೇಶ್ ಮತ್ತು ಆತನ ಪತ್ನಿ ರೂಪಾ ಗೊಲ್ಲರ್ ಸಂತೆಗೆ ಬಂದಿದ್ದರು. ದಂಪತಿ ರಸ್ತೆ ಬದಿ ಆಂಥೋಣಿ ಎಂಬವರಿಂದ ಬೆಡ್ ಶೀಟ್ ಖರೀದಿ ಮಾಡಿದ್ದರು. ಬಳಿಕ ಅದೇ ಆಂಥೋಣಿ ಅವರ ಅಂಗಡಿಯಲ್ಲಿ ಬ್ಯಾಗ್ ಇಟ್ಟು, ಸಂತೆಗೆ ತೆರಳಿದ್ದರು.
ದಂಪತಿ ತೆರಳಿದ ಬಳಿಕ ಬ್ಯಾಗ್ನಲ್ಲಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಅಂಗಡಿಯಲ್ಲಿದ್ದ ಆಂಥೋಣಿ ಮತ್ತು ಮತ್ತೋರ್ವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದು, ಸಿಡಿಮದ್ದು ಸ್ಫೋಟಗೊಂಡಿದ್ದನ್ನು ಖಚಿತಪಡಿಸಿದ್ದಾರೆ.
ದಂಪತಿ ಪೊಲೀಸರ ವಶಕ್ಕೆ
ಸದ್ಯ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…