ನೀರು, ವಿದ್ಯುತ್ ಒದಗಿಸಿ ಜನರ ಜೀವ ಉಳಿಸಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ

ಹೊಸನಗರ: ಸಮರ್ಪಕವಾಗಿ ನೀರು, ವಿದ್ಯುತ್ ಒದಗಿಸಿ ಇಲ್ಲವಾದರೆ ಗ್ರಾಮ ಪಂಚಾಯತಿ ಬಾಗಿಲು ಹಾಕಿ ಎಂದು ಸಾಲಗೇರಿ ಗ್ರಾಮಸ್ಥರು ಘೋಷಣೆ ಕೂಗುವುದರೊಂದಿಗೆ ಮೇಲಿನಬೆಸಿಗೆ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರಾದ ಮಂಜುನಾಥ್‌, ಸಾಲಗೇರಿ ಗ್ರಾಮಕ್ಕೆ ಒಂದು ವರ್ಷದಿಂದ ಸರಿಯಾದ ನೀರಿನ ವ್ಯವಸ್ಥೆಯಿಲ್ಲದೆ ಜನರು ದಿನನಿತ್ಯ ಪರದಾಟ ನಡೆಸುತ್ತಿದ್ದಾರೆ. ನೀರಿನ ಸಮಸ್ಯೆಗೆ ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತಿಗೆ ಆಗಾಗ ತಿಳಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ. ನಮಗೆ ಬರಿ ಹಾರಿಕೆಯ ಉತ್ತರವನ್ನೇ ನೀಡುತ್ತಾ ಬಂದಿದ್ದಾರೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಇದ್ದರೂ ಸಹ ನಮ್ಮ ಸಾಲಗೇರಿ ಜನರ ಪಾಲಿಗೆ ಸತ್ತಂತಿದೆ. ರಸ್ತೆ ಕಾಮಗಾರಿ ಮತ್ತು ಜೆ.ಜೆ.ಎಂ ಕಾಮಗಾರಿಯ ಕಥೆಗಳನ್ನು ಹೇಳಿ ಜನರಿಗೆ ಕಾಗೆ ಹಾರಿಸಿದ್ದು, ಈಗಾಗಲೇ ನೀರಿಗೆ ಬರ ಬಂದಿದ್ದು ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರುಗಳು, ಪಿಡಿಒಗಳು ತಕ್ಷಣ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಈ ಗ್ರಾಮದಲ್ಲಿ ನೀರಿನ ಸಮಸ್ಯೆ ವಿಪರೀತವಾಗುವುದರಲ್ಲಿ ಅನುಮಾನವಿಲ್ಲ. ತಕ್ಷಣ ನಮ್ಮ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದರು.

ವಿದ್ಯುತ್ ಸಮಸ್ಯೆ ಬಗೆಹರಿಸಿ :
ಸಾಲಗೇರಿ ಗ್ರಾಮದಲ್ಲಿ ಸುಮಾರು 180 ಮನೆಗಳಿದ್ದು ಸುಮಾರು 25 ವರ್ಷಗಳ ಹಿಂದೆ ಕೇವಲ 25 ಮನೆಗಳಿಗೆ ವಿದ್ಯುತ್ ಸರಬರಾಜಿಗಾಗಿ ಒಂದು ಟಿ.ಸಿ ಅಳವಾಡಿಸಲಾಗಿದೆ‌. 25 ವರ್ಷಗಳ ಹಿಂದೆ ಹಾಕಿರುವ ಟ್ರಾನ್ಸ್‌ಫಾರ್ಮರ್ 25 ಮನೆಗಳಿಗೆ ವಿದ್ಯುತ್ ಸರಬರಾಜು ಮಾಡಲು ಸಾಕಾಗುತ್ತಿತ್ತು ಆದರೆ 25 ವರ್ಷಗಳ ಹಿಂದೆ ಇದ್ದ 25 ಮನೆಗಳು ಬದಲಾಗಿ ಈಗ ಸುಮಾರು 180 ಮನೆಗಳಿವೆ ಅದೇ ಟಿ.ಸಿಯಲ್ಲಿ 180 ಮನೆಗಳಿಗೂ ಒಂದೇ ಟಿ.ಸಿಯಲ್ಲಿ ವಿದ್ಯುತ್ ನೀಡುತ್ತಿರುವುದರಿಂದ ಮನೆಗಳಿಗೆ ಬೇಕಾಗುವಷ್ಟು ವಿದ್ಯುತ್ ದೊರೆಯುತ್ತಿಲ್ಲ. ವೋಲ್ಟೇಜ್ ಇಲ್ಲದ ಕಾರಣ ಕೆಲವು ಮೋಟಾರ್‌ಗಳು, ವಿದ್ಯುತ್ ಉಪಕರಣಗಳು ಸುಟ್ಟು ಹೋಗಿದೆ. ತಕ್ಷಣ ಹಳೇ ಟಿ.ಸಿಯನ್ನು ತೆಗೆದು 180 ಮನೆಗಳಿಗೆ ವಿದ್ಯುತ್ ಸೌಲಭ್ಯ ನೀಡುವ ಹೊಸ ಟಿ.ಸಿಯನ್ನು ಹಾಕಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಮೇಲಿನಬೇಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ವಿದ್ಯುತ್ ಸಮಸ್ಯೆ ಇರುವುದು ನಿಜ ಒಂದೇ ವಾರದಲ್ಲಿ ಸರ್ಕಾರದ ಸೌಲಭ್ಯವನ್ನು ಬಳಸಿಕೊಂಡು ಬೋರ್‌ವೇಲ್ ತೆಗೆದು ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರಿಗೆ ನೀರಿನ ಸೌಲಭ್ಯ ನೀಡುತ್ತೇವೆ. ನನ್ನ ಬಗ್ಗೆ ಭರವಸೆ ಇಡಿ, ಎಷ್ಟೇ ಕಷ್ಟಕರವಾಗಿದ್ದರೂ ಬಗೆಹರಿಸುವ ಜವಾಬ್ದಾರಿ ನನ್ನದು ಹಾಗೂ ವಿದ್ಯುತ್ ತೊಂದರೆಯ ಬಗ್ಗೆ ನನ್ನ ಗಮನಕ್ಕೆ ನೀವು ತಂದಿರುವುದು ಸರಿ. ಒಂದೆರಡು ದಿನದಲ್ಲಿ ಕೆ.ಇ.ಬಿ ಇಂಜಿನಿಯರ್‌ರವರನ್ನು ಗ್ರಾಮ ಪಂಚಾಯತಿಗೆ ಕರೆಸಿ ಬೇರೆ ಟಿ.ಸಿ ಹಾಕಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್‌ ರೆಡ್ಡಿ ಭರವಸೆ ನೀಡಿದ ಮೇಲೆ ಪ್ರತಿಭಟನಾಕಾರರು ಪ್ರತಿಭಟನೆ ಕೈ ಬಿಟ್ಟರು.

ಈ ಪ್ರತಿಭಟನೆಯಲ್ಲಿ ಜಯನಗರ ಪ್ರಹ್ಲಾದ್, ಕೃಷ್ಣಮೂರ್ತಿ, ನಾಗೇಂದ್ರ, ಅವಿನಾಶ್, ಸಚಿನ್, ಚೇತನ ಶೆಟ್ಟಿ, ಹೈದರ್‌ಆಲಿ, ಶಾಂತಾ ಗಿರೀಶ್, ವಿಶಾಲಾಕ್ಷಿ, ಗಾಯಿತ್ರಿ, ರೇಖಾ, ಶಿವರಾಜ್, ಸುರೇಶ್, ಗಣೇಶ ಭಂಡಾರಿ, ಅಮೃತ ಮಂಜುನಾಥ್, ಮುಮ್ತಾಜ್, ರೆಯಲ್, ನಬೀಸಾ ಹಸನ್ ಇನ್ನೂ ಮುಂತಾದವರು ಇದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

3 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

16 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

19 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

19 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

1 day ago