ಶಿವಮೊಗ್ಗ: ಮುಂಬರಲಿರುವ ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸುವ ಅಭಿಲಾಷೆ ಹೊಂದಿದ್ದು, ನನಗೆ ಅವಕಾಶ ಸಿಗಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಅವರು ಭಾನುವಾರ ಮಿಷನ್ ಕಾಂಪೌಂಡಿನಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೊಂದಣಿ ಕಚೇರಿ ಉದ್ಘಾಟಿಸಿ ನಂತರ ಮಾತನಾಡಿದರು.
ನೈರುತ್ಯ ಪದವೀಧರರ ಕ್ಷೇತ್ರ ಐದೂವರೆ ಜಿಲ್ಲೆಗಳನ್ನು ಒಳಗೊಂಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಅಲ್ಲದೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲೂಕುಗಳನ್ನು ಒಳಗೊಂಡಿದೆ. ಸೆ.30ರಿಂದ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ. ಪದವೀಧರರು ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ನಾಲ್ಕೈದು ಜನ ಆಕಾಂಕ್ಷಿಗಳಿದ್ದಾರೆ. ಆದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ. ಪಕ್ಷವು ನನಗೇ ಟಿಕೆಟ್ ನೀಡಬಹುದೆಂಬ ಭರವಸೆ ಇದೆ. ಅದಕ್ಕಾಗಿಯೇ ಈಗಿನಿಂದಲೇ ಸಿದ್ಧತೆ ಮಾಡಿಕೊಂಡಿದ್ದೇನೆ. ಹೊಸ ಮತದಾರರು ತಮ್ಮ ಅರ್ಜಿಯನ್ನು ನಮ್ಮ ಹೊಸ ಕಾರ್ಯಾಲಯದಿಂದ ಪಡೆದು ಇಲ್ಲಿಗೆ ಸಲ್ಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎರಡೂ ಪಕ್ಷಗಳಿಗೆ ಈ ಬಾರಿ ಮತದಾರ ತಕ್ಕ ಉತ್ತರ ಕೊಟ್ಟಿದ್ದಾನೆ. ಅವರ ಶಕ್ತಿಯೇ ಕುಂದುತ್ತಿದೆ. ಕುರುಡನ ಹೆಗಲ ಮೇಲೆ ಕುಂಟ ಸವಾರಿ ಮಾಡಿದಂತಾಗುತ್ತದೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್, ಧೀರರಾಜ್ ಹೊನ್ನವಿಲೆ, ಏಸುದಾಸ್, ಚಾಮರಾಜ್, ಎನ್.ಕೆ. ಶಾಮ್ಸುಂದರ್, ಪದ್ದಣ್ಣ, ಲಕ್ಷ್ಮಣ್, ಶಿ.ಜು. ಪಾಶಾ ಸೇರಿದಂತೆ ಅನೇಕರು ಶುಭ ಹಾರೈಸಿದರು.
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…