Categories: Shivamogga

ನೈರುತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆ ; ಆಯನೂರು ಮಂಜುನಾಥ್

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇದ್ದು, ಅದಕ್ಕಾಗಿ ನಾಳೆಯಿಂದಲೇ ಕ್ಷೇತ್ರದಲ್ಲಿ ಪ್ರವಾಸ ಮಾಡುವೇ ಎಂದು ಕೆಪಿಸಿಸಿ ವಕ್ತಾರ ಹಾಗೂ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್ ಹೇಳಿದರು.

ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾವು ಹಲವು ವರ್ಷಗಳಿಂದ ಕಾಲೇಜು ಅತಿಥಿ ಉಪನ್ಯಾಸಕರ ಕಾರ್ಮಿಕರ ಸಮಸ್ಯೆಗಳನ್ನಿಟ್ಟುಕೊಂಡು ಯಾವುದೇ ಸರ್ಕಾರವಿದ್ದರು ಹೋರಾಟ ನಡೆಸುತ್ತಾ ಬಂದಿದ್ದೇನೆ. ಸದನದಲ್ಲಿ ಗಟ್ಟಿ ಧ್ವನಿಯನ್ನು ಎತ್ತಿದ್ದೇನೆ. ನೈರುತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್ ಸಿಗುತ್ತದೆ ಎಂಬ ಭರವಸೆ ಇದೆ. ರಾಜ್ಯದ ನಾಯಕರು ಈ ಸೂಚನೆ ನೀಡಿದ್ದಾರೆ. ಕ್ಷೇತ್ರದಲ್ಲಿ ಓಡಾಡುವಂತೆ ಸಲಹೆ ಕೊಟ್ಟಿದ್ದಾರೆ. ಅದರಂತೆ ನಾಳೆಯಿಂದಲೇ ಕ್ಷೇತ್ರದಲ್ಲಿ ಓಡಾಡುತ್ತೇನೆ. ಕಳೆದ 42 ವರ್ಷಗಳಿಂದ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿಲ್ಲ. ಈ ಬಾರಿ ಗೆದ್ದು ತೋರಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರುವ ಇಂಗಿತವನ್ನು ವ್ಯಕ್ತಪಡಿಸಿದೆ. ಹೊಸ ಪಿಂಚಣಿ ವ್ಯವಸ್ಥೆ ರದ್ದಾಗಲಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಮತ್ತು ಮುಂದಿನ ಆಯ-ವ್ಯಯ ಬಜೆಟ್‌ನಲ್ಲಿಯೂ ಕೂಡ ಚರ್ಚಿಸಲಾಗುತ್ತಿದೆ. ಇದು ಅತ್ಯಂತ ಸ್ವಾಗತದ ವಿಷಯವಾಗಿದೆ ಎಂದರು.

ಆದರೆ, ಸರ್ಕಾರಿ ನೌಕರರಿಗೆ ಜಾರಿಗೆ ಬರುವಂತೆ ಅನುದಾನಿತ ಖಾಸಗಿ, ಅರೆ ಸರ್ಕಾರಿ ಸ್ವಯುತ್ತತೆ ಹೊಂದಿರುವ ಸರ್ಕಾರಿ ನೌಕರರಿಗೂ ಕೂಡ ಈ ಯೋಜನೆಯೂ ವಿಸ್ತಾರವಾಗಬೇಕಾಗಿದೆ. ಏಕೆಂದರೆ 2006ರ ನಂತರ ನೌಕರಿ ಪಡೆದವರಿಗೆ ಇದು ಅನ್ವಯವಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದೆ. ಅದು ಏನೆಂದರೆ 2005ರಲ್ಲಿ ನೋಟಿಪೀಕೇಷನ್ ಆಗಿ, ಪಟ್ಟಿಯೂ ರೆಡಿ ಇದ್ದು, 2006ರಲ್ಲಿ ನೌಕರಿ ನೀಡಿದ್ದರೆ ಅಂತವರಿಗು ಕೂಡ ಹಳೇ ಪಿಂಚಣಿ ವ್ಯವಸ್ಥೆ ಜಾರಿಯಾಗಲಿದೆ. ಈ ಅನುಕೂಲವನ್ನು ಅನುದಾನಿತ ಶಾಲೆಯ ನೌಕರರು ಕೂಡ ಪಡೆಯಬೇಕು, ಏಕೆಂದರೆ, ಅನುದಾನ ಪಡೆಯುವ ಮೊದಲು ಹಲವು ವರ್ಷಗಳ ತನಕ ಅಲ್ಲಿ ಕೆಲಸ ಮಾಡಿದ್ದಾರೆ. ಹಾಗಾಗಿ ಇವರಿಗೂ ಕೂಡ ಓಪಿಎಸ್ ಜಾರಿಯಾಗಬೇಕು. ಸುಮಾರು 11500 ನೌಕರರಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತು ಅನಂತ್‌ಕುಮಾರ್ ಹೆಗಡೆ ಮಾತನಾಡಿರುವುದು ಸರಿಯಲ್ಲ. ಯಾರೇ ಆಗಲಿ, ಯಾವ ಪಕ್ಷದವರೇ ಆಗಲಿ ಮಾತಿನಲ್ಲಿ ಹಿಡಿತ ಇಟ್ಟುಕೊಳ್ಳಬೇಕು. ಸಾರ್ವಜನಿಕರ ವೇದಿಕೆಯಲ್ಲಿ ಮಾತನಾಡುವಾಗ ಪ್ರಜ್ಞೆ ಬಹಳ ಮುಖ್ಯ, ಇದು ಯಾರು ಮಾಡಿದರೂ ತಪ್ಪೇ ಇತ್ತೀಚೆಗೆ ಶಿವಮೊಗ್ಗದ ಶಾಸಕರು ಕೂಡ, ಬಾರೋ ಮಗನೆ ನೋಡಿಕೊಳ್ಳುತ್ತೇನೆ ಎಂದು ಮಾತನಾಡಿದ್ದರು, ಇದು ಸರಿಯಲ್ಲ. ಅನಂತ್‌ಕುಮಾರ್ ಹೆಗಡೆ ನನ್ನ ಗೆಳೆಯರು ಅವರು ಕ್ಷಮೆ ಕೇಳಿ ಇದನ್ನು ಮುಗಿಸಬೇಕು. ಬಿಜೆಪಿ ನಾಯಕರುಗಳು ದೇವಸ್ಥಾನವನ್ನು ಸ್ವಚ್ಛ ಮಾಡಿದರೆ ಮಾತ್ರ ಸಾಲದು ಅವರ ಮನಸ್ಸನ್ನು ಕೂಡ ಸ್ವಚ್ಛಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಧೀರರಾಜ್ ಹೊನ್ನವಿಲೆ, ಶಿ.ಜು.ಪಾಶ, ಹಿರಣ್ಣಯ್ಯ, ಲಕ್ಷ್ಮಣ್ಣಪ್ಪ, ಎಸ್.ಪಿ.ಪಾಟೀಲ್, ಕೃಷ್ಣ ಇದ್ದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

7 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

8 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

8 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

10 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

12 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

14 hours ago