ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ5ನೇ ವರ್ಷದ ದೀಪೋತ್ಸವ | ಪ್ರಕೃತಿ ಸಂರಕ್ಷಣೆ, ಸ್ಥಾನೀಯ ಇತಿಹಾಸ ಸ್ಮರಣೆ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ (Hombuja) ಅತಿಶಯ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು.

ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಬಳಿಕ ಭೂಮಿಗೆ ಅಮೂಲ್ಯ ಜಲನಿಧಿಯಾಗಿ ಆರಾಧಿಸಲ್ಪಡುವ ಕುಮುದ್ವತಿ ತೀರ್ಥದಲ್ಲಿ ಕಾರ್ತೀಕ ಲಕ್ಷದೀಪೋತ್ಸವ ನಿಮಿತ್ತ ಸೋಮವಾರದಂದು ನಡೆದ ಧಾರ್ಮಿಕ ಪ್ರವಚನದಲ್ಲಿ “ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯಿಂದ ಜೀವನ ನಿರ್ವಹಣೆ ಸುಲಲಿತ. ಆದರೆ ನಮ್ಮ ಪೂರ್ವಜರು ಆರಾಧಿಸುವ ಪುಣ್ಯಪವಿತ್ರ ಸಾನಿಧ್ಯದ ಇತಿಹಾಸ ಅರಿತು, ಪರಂಪರೆ ಉಳಿಸುವ ಮೂಲಕ ಆಧ್ಯಾತ್ಮಿಕ ಸ್ಪರ್ಶದಿಂದ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುತ್ತದೆ. ಧಾರ್ಮಿಕ ಪ್ರಜ್ಞೆ ಬೆಳೆದು ಪ್ರೀತಿ ವಾತ್ಸಲ್ಯದ ಅನ್ಯೋನ್ಯ ಸಂಬಂಧಗಳು ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುವಂತೆ ಪ್ರೇರಣೆ ನೀಡುತ್ತದೆ ಎಂದು ವಿವರಿಸುತ್ತಾ ಕಾರ್ತೀಕ ಮಾಸದಲ್ಲಿ ದೀಪಾರಾಧನೆಯ ಸಂಸ್ಕೃತಿಯು ಸ್ಥಾನಿಕ ಅಭಿವೃದ್ಧಿ, ರಕ್ಷಣೆಗಾಗಿ ಸಂದೇಶ ನೀಡುತ್ತಿದ್ದು, ಪ್ರತಿಯೋರ್ವರ ಸದ್ಭಾವನೆಯ ಜೀವನ ಯಶಸ್ವಿಯಾಗಲಿ” ಎಂದು ಆಶೀರ್ವಚನ ನೀಡಿದರು.

ಊರ ಸಮಸ್ತರು, ಪರವೂರ ಭಕ್ತರು ವೈಶಿಷ್ಟಪೂರ್ಣ ದೀಪಾರಾಧನೆಯ ವರ್ಣರಂಜಿತ ದೃಶ್ಯಗಳಿಂದ ಮಂತ್ರಮುಗ್ಧರಾದರು. ಶ್ರೀಮಠದ ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಹುಂಚ-ಬಿಲ್ಲೇಶ್ವರ ಗ್ರಾಮದ ನಾಗರೀಕರು ಲಕ್ಷದೀಪೋತ್ಸವದ ದೃಶ್ಯಾವಳಿಯಿಂದ ಪುನೀತರಾದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

5 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

8 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

9 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

11 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

11 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

19 hours ago