ಸಾಗರ: ‘ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲಸ’ ಎಂದು ಕೇಳಿ ವ್ಯಕ್ತಿಯೊಬ್ಬ ಇಬ್ಬರು ಯುವಕರ ಮೇಲೆ ದಾಳಿ ಮಾಡಿದ್ದಾನೆ. ಕತ್ತಿ ಮತ್ತು ರಾಡ್ನಿಂದ ಮೊದಲು ಯುವಕನ ಕಾರಿನ ಮೇಲೆ ದಾಳಿ ಮಾಡಿದ ವ್ಯಕ್ತಿ, ಯುವಕ ಮನೆಯಿಂದ ಹೊರಬರುತ್ತಿದ್ದಂತೆಯೇ ಆತನ ಮೇಲೂ ಎರಗಿರುವ ಘಟನೆ ಸಾಗರದ ಬೆಳಲಮಕ್ಕಿಯಲ್ಲಿ ನಡೆದಿದೆ.
ಘಟನಾ ವಿವರ :
ರವಿಕುಮಾರ್ ಎಂಬಾತ ಪತ್ನಿ ಜತೆ ಒಂದು ಮನೆಯಲ್ಲಿ ವಾಸವಾಗಿದ್ದ. ಅಲ್ಲೇ ಪಕ್ಕದ ಮನೆಯಲ್ಲಿ ನವೀನ್ ಎಂಬಾತ ವಾಸವಾಗಿದ್ದ. ನವೀನ್ ತನ್ನ ಪತ್ನಿ ಜತೆ ಮಾತನಾಡುತ್ತಿರುವುದು ರವಿಕುಮಾರ್ ಗಮನಕ್ಕೆ ಬಂದಿತ್ತು. ಈ ವಿಚಾರದಲ್ಲಿ ಮನೆಯಲ್ಲೂ ಮಾತು, ಚಕಮಕಿ ನಡೆದಿತ್ತು. ಈ ನಡುವೆ ರವಿಕುಮಾರ್ ಸಿಟ್ಟಿನಿಂದ ನವೀನ್ ಕುಮಾರ್ ಮನೆಯ ಬಳಿ ಹೋಗಿದ್ದಾನೆ. ಮೊದಲು ಮನೆಯ ಹೊರಗಿದ್ದ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾನೆ. ಕತ್ತಿ ಹಾಗೂ ರಾಡ್ನಿಂದ ನವೀನ್ ಕಾರಿಗೆ ಹಾನಿ ಮಾಡಿದ್ದಾರೆ. ಕಾರಿನ ಗಾಜು ಒಡೆಯುತ್ತಿರುವುದನ್ನು ತಿಳಿದ ನವೀನ್ ಮನೆಯಿಂದ ಹೊರಗೆ ಬರುತ್ತಿದ್ದಂತೆಯೇ ರವಿಕುಮಾರ್ ಆತನ ಮೇಲೆ ನೇರ ದಾಳಿ ಮಾಡಿದ್ದಾನೆ.
ರವಿಕುಮಾರ್ ದಾಳಿ ಮಾಡುತ್ತಿರುವುದನ್ನು ನೋಡಿ ನವೀನ್ನ ಸ್ನೇಹಿತ ಧರೇಶ್ ಅಲ್ಲಿಗೆ ಓಡಿ ಬಂದ. ಆಗ ರವಿಕುಮಾರ್ ಆತನ ಮೇಲೂ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ನವೀನ್ ಹಾಗೂ ಧರೇಶ್ ಗೆ ಗಾಯಗಳಾಗಿವೆ. ನವೀನ್ ಬೆರಳು ತುಂಡಾಗಿದ್ದು, ಎದೆ ಭಾಗಕ್ಕೆ ತೀವ್ರ ಗಾಯವಾಗಿದೆ ಈತನನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೊಬ್ಬ ಗಾಯಾಳು ಧರೇಶ್ಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ರವಿಕುಮಾರ್ ವಶಕ್ಕೆ ಪಡೆದ ಪೊಲೀಸರು ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…