ಶಿವಮೊಗ್ಗ ; ಒಬ್ಬ ಗಂಡನಾಗಿ ನನ್ನ ಹೆಂಡತಿಯು ಶಾಸಕಿ, ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ ಎಂದು ನಟ ಶಿವರಾಜ್ಕುಮಾರ್ (Actor ShivarajKumar) ತಮ್ಮ ಆಶಯವನ್ನು ಹಾಕಿದರು.
ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿ, ಗೀತಾ ಶಿವರಾಜ್ಕುಮಾರ್ ಈಗಾಗ್ಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಶಾಸಕ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಪೂರ್ತಿ ದೊರೆಯಲಿದೆ ಇದಕ್ಕಾಗಿ ಜನಪ್ರತಿನಿಧಿ ಆಗಬೇಕು ಎಂಬ ಆಶಯ ಇದೆ ಎಂದರು.
ಗೀತಾ ಶಿವರಾಜಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ ರಾಜಕೀಯ ಕುಟುಂಬದಿಂದ ಆಕೆ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ ಎಂದರು.
ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಇಲ್ಲವಾದರೆ ಬೇಸರವಿಲ್ಲ ನಾವು ಯಾವುದಕ್ಕೂ ಸಿದ್ಧ ಇದ್ದೇವೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ ಪ್ರಚಾರಕ್ಕೂ ನಾನು ಬರುತ್ತೇನೆ ಸಿನಿಮಾ ಚಿತ್ರಿಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ ನಾನು ಸಿನಿಮಾರಂಗದಲ್ಲಿ ಇರುವುದರಿಂದ ಚುನಾವಣೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…