ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಕಡ್ಡಾಯಗೊಳಿಸಲು ಜಿಲ್ಲಾಡಳಿತಕ್ಕೆ ಬಿಜೆಪಿ ಯುವ ಮುಖಂಡ ನರ‍್ಲೆ ರಮೇಶ್ ಆಗ್ರಹ


ಹೊಸನಗರ: ಮುಂಬರುವ ಪದವೀಧರ ಕ್ಷೇತ್ರದ ಚುನಾವಣೆಗಾಗಿ ಮತದಾರರ ಪಟ್ಟಿ ನೋಂದಣಿ ಹಾಗೂ ಪರೀಕ್ಷರಣ ಕಾರ್ಯ ಆರಂಭಗೊಂಡಿದ್ದು, ಪದವಿ ಪಡೆದು ಮೂರು ವರ್ಷ ಪೂರ್ಣಗೊಂಡ ಮತದಾರರು ಈ ಕ್ಷೇತ್ರದ ಅಭ್ಯರ್ಥಿಗೆ ಮತ ಚಲಾವಣೆ ಮಾಡಲು ಅರ್ಹತೆ ಹೊಂದಿದ್ದರೂ, ತಮ್ಮ ಹೆಸರು ನೋಂದಣಿ ಮಾಡಲು ಮೀನಾಮೇಷ ಎಣಿಸುತ್ತಿರುವುದು ಚುನಾವಣೆಯ ಅಗತ್ಯತೆಯನ್ನೇ ಪ್ರಶ್ನಿಸುವಂತೆ ಮಾಡಿದೆ ಎಂದು ಹೊಸನಗರ ತಾಲೂಕಿನ ಬಿಜೆಪಿ ಯುವ ಮುಖಂಡ ನರ‍್ಲೆ ರಮೇಶ್ ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮುಂಬರುವ ನೈರುತ್ಯ ಪದವಿಧರ ಕ್ಷೇತ್ರದ ಅರ್ಹ ಮತದಾರರು ತಮ್ ಹೆಸರು ನೋಂದಣಿ ಕಾರ್ಯಕ್ಕೆ ಮುಂದಾಗುವಂತೆ ಈವರೆಗೂ ಯಾವುದೇ ಸ್ಪಷ್ಟ ಮಾಹಿತಿ ನೀಡುವಲ್ಲಿ ಜಿಲ್ಲಾಡಳಿತ ವಿಫವಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದು, ಚುನಾವಣಾ ಆಯೋಗವು ಈ ಬಗ್ಗೆ ಯಾವುದೇ ಸೂಕ್ತ ತರಹದ ಜಾಹೀರಾತು, ಮಾಧ್ಯಮ ಪ್ರಕಟಣೆಯನ್ನು ನೀಡಿಲ್ಲ. ಕಳೆದ ಬಾರಿ ಹೊಸನಗರ ತಾಲೂಕಿನಲ್ಲಿ ಕೇವಲ 1300 ಪದವಿಧರ ಮತದಾರರು ಹೆಸರು ನೋದಾಯಿಸಿದ್ದರು. ಆದರೆ, ಈ ಬಾರಿ ಇದು ಈ ವರೆಗೂ ಕೇವಲ ಏಳು ನೂರು ಪದವಿಧರರು ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಮುಂದಾಗಿರುವುದು ಆಶ್ಚರ್ಯಕರ ಬೆಳವಣಿಗೆ ಎಂಬಂತೆ ಕಂಡುಬರುತ್ತಿದೆ.

ಶೇ.15 ನೋಂದಾಯಿತ ಪದವಿಧರರು ಉಳಿದ ಶೇ.85ರಷ್ಟು ನೋಂದಣಿ ಆಗದವರನ್ನು ಆಳುವ ಪರಿ ಪದವಿಧರ ಕ್ಷೇತ್ರದ ಅಸ್ತಿತ್ವವನ್ನು ಪ್ರಜ್ಞಾವಂತ ಜನತೆ ಇಂದು ಪ್ರಶ್ನಿಸುವಂತಿದೆ. ಈ ಎಲ್ಲಾ ತುಕ್ಕು ಹಿಡಿದಂತಿರುವ ಅನಿಷ್ಟ ಪದ್ದತಿಗಳಿಗೆ ಸರ್ಕಾರ ಕೂಡಲೇ ಇತಿಶ್ರೀ ಹಾಡಲು ಮುಂದಾಗುವಂತೆ ಒತ್ತಾಯಿಸಿರುವ ಅವರು, ಪದವಿಧರ ಕ್ಷೇತ್ರದ ಮತದಾರರ ನೋಂದಣಿ ಕಡ್ಡಾಯಗೊಳಿಸುವಂತೆ ಚುನಾವಣಾ ಆಯೋಗವನ್ನು ತಾಲೂಕು ಪದವಿಧರ ಒಕ್ಕೂಟದ ಪರವಾಗಿ ಒತ್ತಾಯಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

6 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

10 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

10 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

13 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

13 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

20 hours ago