Categories: RipponpeteShivamogga

ಪಿಎಂಜಿಎಸ್‌ವೈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಗೆ 200 ಕೋಟಿ ರೂ. ಅನುದಾನ ; ಸಂಸದ ಬಿವೈಆರ್

ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣಕ್ಕೆ ಪಿಎಂಜಿಎಸ್‌ವೈ ಯೋಜನೆಯಡಿ 3.48 ಕೋಟಿ ರೂ. ವೆಚ್ಚದ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಜಲಜೀವನ ಯೋಜನೆಯಡಿ ಪ್ರತಿ ಮನೆಗೆ ಶುದ್ದಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಜಿಲ್ಲೆಯ 5 ಲಕ್ಷ ಮನೆಗಳಲ್ಲಿ ಈಗಾಗಲೇ 2 ಲಕ್ಷ ಮನೆಗಳಿಗೆ ಈ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಆಯುಷ್ಮಾನ್‌ ಕಾರ್ಡ್‌ನಿಂದಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 5 ಲಕ್ಷ ರೂ. ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 2 ಲಕ್ಷ ರೂ. ಈ ಯೋಜನೆಯನ್ವಯ ಜಿಲ್ಲೆಯ 174 ಕೋಟಿ ರೂ. ವೆಚ್ಚದಲ್ಲಿ ಬಡಕುಟುಂಬದವರು ಆರೋಗ್ಯದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆಂದರು.

ಇನ್ನೂ ಉಜ್ವಲ ಯೋಜನೆಯಡಿ 700 ರೂ.ಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆಯನ್ವಯ ನಮ್ಮ ತಾಯಂದಿರು ಕಟ್ಟಿಗೆ ಬಳಸಿ ಹೊಗೆಯಲ್ಲಿ ಅಡುಗೆ ಮಾಡುವುದನ್ನು ತಪ್ಪಿಸುವುದರೊಂದಿಗೆ ಕಡಿಮೆ ಹಣದಲ್ಲಿ ಗ್ಯಾಸ್ ಸೌಲಭ್ಯವನ್ನು ನೀಡಲಾಗುತ್ತಿದ್ದು ಕೇವಲ ದಿನಕ್ಕೆ 12 ರೂ. ವೆಚ್ಚದಲ್ಲಿ ಕೇವಲ 700 ರೂ. ನಲ್ಲಿ ಉಜ್ವಲ ಗ್ಯಾಸ್ ಸಂಪರ್ಕದಿಂದ ಎರಡು ತಿಂಗಳು ಬಳಕೆಯಾಗುತ್ತಿದೆ ಎಂದು ವಿವರಿಸಿ ಹೊಸನಗರ ತಾಲ್ಲೂಕಿಗೆ ಈಗಾಗಲೇ 44 ಬಿ.ಎಸ್.ಎನ್.ಎಲ್. ಟವರ್‌ಗಳನ್ನು ಮಂಜೂರು ಮಾಡಿಸಲಾಗಿದ್ದು ಸದ್ಯದಲ್ಲಿಯೇ ಟವರ್ ನಿರ್ಮಾಣ ಕಾಮಗಾರಿ ಅರಂಭವಾಗಲಿದೆ ಎಂದು ಹೇಳಿದರು.

ಸರ್ಕಾರದ ಗ್ಯಾರಂಟಿ ಯೋಜನೆಯ ಫಲಪಡೆಯಲು ಅಭಿವೃದ್ದಿ ತ್ಯಾಗ:
ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಪಡೆಯಲು ಅಭಿವೃದ್ಧಿ ತ್ಯಾಗ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.


ಬರಬಂದ ಕಾಲ ಮಗ ಉಂಡಂತೆ ಎಂಬ ಗ್ರಾಮೀಣ ಪ್ರದೇಶದ ಗಾದೆ ಮಾತಿನಂತೆ ಈ ಬಾರಿ ಮಳೆಯಾಗದೇ ತೀವ್ರ ಬರಗಾಲ ಎದುರಿಸುವಂತಾಗಿದೆ. ಸಕಾಲದಲ್ಲಿ ಮಳೆಬಾರದೇ ಹಾಕಿದ ಬೆಳೆಗಳು ಒಣಗುತ್ತಿದ್ದು ಮಲೆನಾಡು ಸಂಪೂರ್ಣವಾಗಿ ಬರಗಾಲ ಪ್ರದೇಶವಾಗಿದೆ ಇನ್ನೂ ನವೆಂಬರ್-ಡಿಸೆಂಬರ್ ಅಂತ್ಯದಲ್ಲಿಯೇ ಕುಡಿಯುವ ನೀರಿನ ಅಭಾವ ಎದುರಿಸುವಂತಾಗಿದ್ದು ವಿದ್ಯುತ್ ಸಮಸ್ಯೆ ಸಹ ಕಾಣವಂತಾಗಿದೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರರವರೇ ನೀರಾವರಿ ಸಚಿವರಾಗಿದ್ದು ಅವರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿದ್ದಾರೆ ಹಾಗಾದರೆ ಮುಂದೆ ಏನು ಎಂಬ ಚಿಂತೆ ಕಾಡುವಂತಾಗಿದೆ. ಸರ್ಕಾರದ ಉಪಮುಖ್ಯಮಂತ್ರಿಗಳೇ ಹೀಗೆ ಹೇಳಿದರೆ ಏನು ಕಥೆ ? ಎಂದು ಪ್ರಶ್ನೆ ಮಾಡಿದರು.


ಈ ಹಿಂದೆ ಸಂಸದರನ್ನು ಕಾಣುವುದೇ ಕಷ್ಟಕರವಾಗಿತ್ತು. ಟಿ.ವಿ.ಚಂದ್ರಶೇಖರಪ್ಪ ಮೂರು ಬಾರಿ ಸಂಸದರಾದವರು ಆವರನ್ನು ನಾನು ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಇವರು ಯಾರು ಎಂದು ಕೇಳಿದಾಗ ಅವರೇ ನಮ್ಮ ಸಂಸದರು ಎಂದು ಪರಿಚಯಿಸಿದರು. ಈಗಿನ ಸಂಸದ ರಾಘವೇಂದ್ರರವರು ಸದಾ ಕ್ರಿಯಾಶೀಲರಾಗಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗಾಗಿ ಸಂಕಲ್ಪತೊಟ್ಟು ದೆಹಲಿಯ ಸಂಸತ್ ಭವನದಲ್ಲಿದ್ದು ನಂತರ ಕೇಂದ್ರದ ವಿವಿಧ ಇಲಾಖೆಯ ಮಂತ್ರಿಗಳವರ ಮನೆಗಳಿಗೆ ತೆರಳಿ ಅಭಿವೃದ್ದಿಗಾಗಿ ಅನುದಾನವನ್ನು ತರುವುದರೊಂದಿಗೆ ಪಾರದರ್ಶಕ ಪಾದರಸದಂತೆ ನಮ್ಮ ಯುವ ಸಂಸದರು.
– ಆರಗ ಜ್ಞಾನೇಂದ್ರ, ಶಾಸಕ

ಸಭೆಯಲ್ಲಿ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿನಂತಿ ರಾಘವೇಂದ್ರ, ಉಪಾಧ್ಯಕ್ಷೆ ವನಿತಾ ಗಂಗಾಧರ, ಗ್ರಾಮ ಪಂಚಾಯ್ತಿ ಸದಸ್ಯರಾದ ನಾಗರತ್ನ, ಸುಮಿತ್ರಮ್ಮ, ವಿಶುಕುಮಾರ್, ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಗಣಪತಿ ಬಿಳಗೋಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ನಾಗೇಂದ್ರ ಕಲ್ಲೂರು, ಲಿಂಗಪ್ಪ ಕಗ್ಗಲಿ ಇನ್ನಿತರರು ಹಾಜರಿದ್ದರು.

Malnad Times

Recent Posts

ದತ್ತಪೀಠದಲ್ಲಿ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿದ ಪ್ರವಾಸಿ ಬಸ್ ! ಬಾಲಕ ಸಾವು

ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…

2 hours ago

ರಂಭಾಪುರಿ ಶ್ರೀಗಳ ಮೇ ತಿಂಗಳ ಪ್ರವಾಸ ಕಾರ್ಯಕ್ರಮ ವಿವರ

ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…

3 hours ago

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

5 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

7 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

8 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

14 hours ago