ಹೊಸನಗರ : ಮಲೆನಾಡಿನ ಪಾರಂಪರಿಕ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ತೋಟಗಳಲ್ಲಿ ಮಂಗನ ಹಾವಳಿ ಹೆಚ್ಚಾಗಿದ್ದು, ಇದು ರೈತಾಪಿವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಮಾಮಹೇಶ್ವರಿ ಮಹಿಳಾ ಸಂಘದವರು ಮಂಗನ ಹಾವಳಿ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದ ಕಾರಣ ಶುಕ್ರವಾರ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಬೆಳೆ ನಾಶದಿಂದಾಗಿ ಕೃಷಿಕರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ದಿನ ಕಳೆದಂತೆ ಮಂಗನ ಹಾವಳಿ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಮುತುವರ್ಜಿವಹಿಸಿ ಮಂಗಗಳ ಸೆರೆ ಹಿಡಿಯುವ ಕಾರ್ಯಕ್ಕೆ ಮುಂದಾಗಬೇಕು. ಅಲ್ಲದೆ ಸ್ಥಳಾಂತರ ಮಾಡುವ ಮೂಲಕ ಈ ಭಾಗದ ಕೃಷಿಕರು ನೆಮ್ಮದಿಯ ಜೀವನ ಸಾಗಿಸಲು ಸಹಕರಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು.
ಸಾಗರ ವಿಭಾಗದ ಡಿಎಫ್ಓ ಸಂತೋಷ್ ಕುಮಾರ್ ಕೆಂಚಪ್ಪನವರ್ ಮಾತನಾಡಿ, ಪ್ರಾಣಿ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಮಂಗಗಳ ಸೆರೆ ಕಷ್ಟಸಾಧ್ಯ ಕೆಲಸ. ಗರ್ಭಧರಿಸಿರುವ ಮಂಗಗಳಿಗೆ ಗಾಯ, ನೋವಾಗದಂತೆ ಸೆರೆ ಹಿಡಿಯಬೇಕಿದೆ. ಅವುಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯ ಸದ್ಯಕ್ಕೆ ಅಸಾಧ್ಯ ಮಾತಾಗಿದ್ದು, ಸೆರೆ ಹಿಡಿಯುವ ಕಾರ್ಯದ ಖರ್ಚು-ವೆಚ್ಚವನ್ನು ಸ್ಥಳೀಯ ಸಂಘ-ಸಂಸ್ಥೆಗಳೇ ಭರಿಸಬೇಕಿದೆ. ಸ್ಥಳಾಂತರ ಕುರಿತಂತೆ ಮಾಹಿತಿ ಗೌಪ್ಯತೆ ಕಾಪಾಡಬೇಕಿದೆ. ಅಲ್ಲದೆ, ಸ್ಥಳೀಯ ಗ್ರಾಮ ಪಂಚಾಯತಿ ಆಡಳಿತದ ಮೇಲುಸ್ತುವಾರಿಯಲ್ಲಿ ಈ ಕಾರ್ಯ ನಡೆಯಲಿ ಎಂಬ ಸಲಹೆ ನೀಡಿದರು.
ಗ್ರಾಮಸ್ಥರು ಹಾಗೂ ಅಧಿಕಾರಿಗಳು ಪರಸ್ಪರ ಒಪ್ಪಿ ಸಭಾ ನಡಾವಳಿ ದಾಖಲಿಸಲಾಯ್ತು. ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ಹಹಣಾಧಿಕಾರಿ ನರೇಂದ್ರ ಕುಮಾರ್, ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ಮಜಾತ ದಿನೇಶ್, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪಿಡಿಓ ಜಗದೀಶ್ ಕೆ ಮಗವಾಡ, ಡಿಆರ್ಎಫ್ಓ ದೊಡ್ಮನಿ, ಪ್ರಮುಖರಾದ ಕಿರಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…