Categories: Sagara NewsShivamogga

ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್‌ ಲಾರಿ ; ಓರ್ವ ಸಾವು !

ಸಾಗರ : ಪೆಟ್ರೋಲ್‌ ಬಂಕ್‌ನಲ್ಲಿ (Petrol Bunk) ಮಲಗಿದ್ದ (Sleep) ವ್ಯಕ್ತಿ ಮೇಲೆ ಟಿಪ್ಪರ್‌ ಲಾರಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ (Death) ಘಟನೆ ಉಡುಪಿ (Udupi) ಜಿಲ್ಲೆ ಹೆಬ್ರಿ (Hebri) ಸೋಮೇಶ್ವರ ಪೆಟ್ರೋಲ್‌ ಬಂಕ್‌ ಆವರಣದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೃತನನ್ನು ಸಾಗರ (Sagara) ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪದ ಶಿವರಾಜ್‌ (36) ಎಂದು ಗುರುತಿಸಲಾಗಿದೆ.

ಶಿವರಾಜ್‌ ತನ್ನ ಪಿಕಪ್‌ ವಾಹನದಲ್ಲಿ ಇಬ್ಬರು ಕಾರ್ಮಿಕರೊಂದಿಗೆ ಗುರುವಾರ ರಾತ್ರಿ ಬಾಳೆಕಾಯಿ ತುಂಬಿಕೊಂಡು ಆಗುಂಬೆ-ಸೋಮೇಶ್ವರ ಮಾರ್ಗದಲ್ಲಿ ಉಡುಪಿಗೆ ತೆರಳುತ್ತಿದ್ದರು. ಸೋಮೇಶ್ವರ ತಲುಪಿದಾಗ ತಡರಾತ್ರಿ ಆಗಿದ್ದ ಹಿನ್ನೆಲೆಯಲ್ಲಿ ಪೆಟ್ರೋಲ್‌ ಬಂಕ್‌ನ ಆವರಣದಲ್ಲಿಯೇ ವಾಹನ ನಿಲ್ಲಿಸಿ ಅದರ ಎದುರು ಮಲಗಿದ್ದರು.

ಬೆಳಗಿನ ಜಾವ ಟಿಪ್ಪರ್‌ ಲಾರಿ ಚಾಲಕ ಡೀಸೆಲ್‌ ತುಂಬಿಸಿಕೊಂಡು ತಿರುಗಿಸುವಾಗ ಅಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೈಮೇಲೆ ಹತ್ತಿಸಿಕೊಂಡು ಹೋಗಿದ್ದಾನೆ. ಈ ದುರಂತದಲ್ಲಿ ಶಿವರಾಜ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೋರ್ವ ಕಾರ್ಮಿಕ ಕುಂದೂರು ಮಹೇಂದ್ರ ತೀವ್ರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದ ಒಳಗೆ ಮಲಗಿದ್ದ ಯೋಗೇಶ್‌ ಪಾರಾಗಿದ್ದಾರೆ. ಮೃತ ಶಿವರಾಜ್‌ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Malnad Times

Recent Posts

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

19 mins ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

13 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

15 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

16 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

17 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

18 hours ago