Categories: Shivamogga

ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುವುದು ಬಿಟ್ಟು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ; ಬಿವೈಆರ್

ಶಿವಮೊಗ್ಗ : ಭದ್ರಾವತಿಯ (Bhadravathi) ಗೋಕುಲ್ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾಂಗ್ರೆಸ್ (Congress) ಕಾರ್ಯಕರ್ತರಂತೆ ವರ್ತಿಸುವುದನ್ನು ಬಿಟ್ಟು  ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ (B.Y Raghavendra) ಹೇಳಿದರು.


ಅವರು ಇಂದು ಹಲ್ಲೆಗೊಳ್ಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾದ ಗೋಕುಲ್‌ರವರ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಭದ್ರಾವತಿಯಲ್ಲಿ ನಮ್ಮ ಯುವ ಮೋರ್ಚಾ ಪದಾಧಿಕಾರಿ ಗೋಕುಲ್ ಮೇಲೆ ಹಲ್ಲೆ ಮಾಡಲಾಗಿದೆ. ಈ ಹಲ್ಲೆಯನ್ನು ಶಾಸಕವರ ಕಡೆಯವರು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮುಖಂಡರು ಗೋಕುಲ್ ಮೇಲೆಯೇ ಕೇಸು ದಾಖಲಿಸಿದ್ದಾರೆ. ನಗರಸಭೆಯ ಸಿಬ್ಬಂದಿಗಳಿಗೆ ಎದುರಿಸಿ ಜಾತಿ ನಿಂಧನೆ ಕೇಸು ದಾಖಲಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಗುಂಡಾಗಿರಿ ಸರಿಯಲ್ಲ ಎಂದರು.


ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ರಕ್ಷಣಾಧಿಕಾರಿಗಳಿಗೆ ದೂರು ಕೊಟ್ಟರು ಸಹ ನಿರ್ಲಕ್ಷ್ಯ ವಹಿಸಿದ್ದರೆ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ. ಕೆಲವು ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ, ಹಲವರು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ರಾಜಕಾರಣ ಮಾಡಲು ನಾವು ಇದ್ದೇವೆ. ಆದರೆ, ಪೊಲೀಸರು ಸತ್ಯ ಘಟನೆಯನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದರು.


ಸಂಸತ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದೊಂದು ಗಂಭೀರವಾದ ಮತ್ತು ತಲೆತಗ್ಗಿಸುವ ವಿಷಯ. ಇದರ ಹಿಂದೆ ಷಡ್ಯಂತರವಿದೆ. ಮೈಸೂರಿನ ಸಂಸದ ಪ್ರತಾಪಸಿಂಹರವರ ಮೇಲೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಕರ್ನಾಟಕದವರು ಎಂದರೆ ಎಲ್ಲರಿಗೂ ಪ್ರೀತಿ ಇರುತ್ತದೆ. ಸಹಜವಾಗಿಯೇ ಸಂಸತ್‌ಗೆ ಪ್ರವೇಶ ಮಾಡಲು ಪಾಸು ಕೊಡುತ್ತಾರೆ. ಹಾಗೆಯೇ ಅವರು ಸಹ ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಸಮರ್ಥಿಸಿಕೊಂಡರು.


ದಾಳಿ ಮಾಡಿದ ಹುಡುಗರು ಅದೇಕೆ ಮಾಡಿದರೂ ಅರ್ಥವಾಗುತ್ತಿಲ್ಲ. ಅವರಿಗೇಕೆ ಕೆಟ್ಟುಬುದ್ಧಿ ಬಂದಿತು ಗೊತ್ತಿಲ್ಲ. ಅವರ ಬಗ್ಗೆ ಅನುಕಂಪ ಪಡಲು, ಸಿಟ್ಟು ಮಾಡಿಕೊಳ್ಳಲು ಅರ್ಥವಾಗುತ್ತಿಲ್ಲ ಎಂದರು.


ರಾಹುಲ್‌ಗಾಂಧಿಯವರು ಪ್ರಧಾನಿಯವರನ್ನು ಶನಿ ಎಂದು ಕರೆದಿದ್ದಾರೆ. ಭಾರತ ತಟ್ಟಿದ್ದ ಶನಿಯನ್ನು ಓಡಿಸಿದವರು ಮೋದಿಯವರು, ಇಡೀ ವಿಶ್ವವೇ ಅವರನ್ನು ಮೆಚ್ಚಿದೆ. ಇಂತಹ ವ್ಯಕ್ತಿಗೆ ಶನಿ ಎಂದು ರಾಹುಲ್ ಕರೆದಿರುವುದು ಖಂಡನೀಯ, ಕಾಂಗ್ರೆಸ್ ಪಕ್ಷ ಇಂತಹ ಗೂಂಡಾ ವರ್ತನೆ ಮತ್ತು ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಈ ಎಲ್ಲದರ ವಿರುದ್ಧ ಬೀದಿಗೆ ಬಂದು ಹೋರಾಟ ಮಾಡುತ್ತೇವೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago