ಪ್ರಜಾಪ್ರಭುತ್ವ ವ್ಯವಸ್ಥೆಯು ರಾಜ ಪ್ರಭುತ್ವವಾಗುತ್ತಿರುವುದನ್ನು ವಿರೋಧಿಸಿ ಜನಜಾಗೃತಿಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವೆ ; ಗಣೇಶ್ ಬೆಳ್ಳಿ

ಹೊಸನಗರ: ರಾಜ್ಯದ ಎಲ್ಲಾ ಪಕ್ಷಗಳು ಲೋಕಸಭಾ ಅಭ್ಯರ್ಥಿಗಳ ಘೋಷಣೆ ಮಾಡುತ್ತಾ ಬಂದಿರುವುದನ್ನು ನೋಡಿದರೆ ಮತ್ತೆ ರಾಜಮನೆತನಗಳ ಆಳ್ವಿಕೆಯ ಕಡೆ ಸಾಗುತ್ತಿದೆ ಅನಿಸುತ್ತದೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರುಗಳು ತಾವು ಅಧಿಕಾರ ಅನುಭವಿಸಿದ್ದಲ್ಲದೆ ತಮ್ಮ ಮಕ್ಕಳು ತಮ್ಮ ಮೊಮ್ಮಕ್ಕಳಿಗೂ ಅಧಿಕಾರವನ್ನು ವರ್ಗಾಯಿಸುವ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದ್ದು ಎಲ್ಲ ಪಕ್ಷಗಳ ಕುಟುಂಬ ರಾಜಕೀಯಕ್ಕೆ ಬೇಸತ್ತು ಈ ಬಾರಿ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸಲಿದ್ದೇವೆ ಎಂದು ಜನಜಾಗೃತಿಯ ಗಣೇಶ್ ಬೆಳ್ಳಿಯವರು ಈ ಮೂಲಕ ತಿಳಿಸಿದ್ದಾರೆ.

ರಾಜಕೀಯದಲ್ಲಿ ನೈತಿಕತೆಯನ್ನು ಸರ್ವನಾಶ ಮಾಡಿದ ರಾಜಕಾರಣಿಗಳು ಈಗ ರಾಜಕೀಯವನ್ನು ತಮ್ಮ ಕುಟುಂಬದ ಆಸ್ತಿಯನ್ನಾಗಿ ಮಾಡುವ ರೀತಿ ನಡೆದುಕೊಳ್ಳುತ್ತಿದ್ದಾರೆ. ದೇಶದಾದ್ಯಂತ ಲಾಲೂ, ಮುಲಾಯಂ ಹೆಸರುಗಳನ್ನು ಕೇಳಿದ ನಮಗೆ ನಮ್ಮ ರಾಜ್ಯದಲ್ಲಿಯೂ ಅದೇ ವಂಶ ಪಾರಂಪರ್ಯ ರಾಜಕಾರಣ ಪ್ರತಿ ಜಿಲ್ಲೆಯಲ್ಲಿಯೂ ಪ್ರಾರಂಭವಾಗುತ್ತಿರುವುದು ಅಪಾಯಕಾರಿ. ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕಿದ ಸಂದರ್ಭದಲ್ಲಿ 540 ರಾಜ ಸಂಸ್ಥಾನಗಳು ಭಾರತದಲ್ಲಿದ್ದು ಅವುಗಳನ್ನು ಸರ್ದಾರ್ ವಲ್ಲಭಾಯಿ ಪಟೇಲ್ ಕಾರ್ಯಾಧ್ಯಕ್ಷತೆಯಲ್ಲಿ ಪ್ರಜಾಪ್ರಭುತ್ವ ಒಕ್ಕೂಟಕ್ಕೆ ಸೇರಿಸಿಕೊಳ್ಳಲಾಯಿತು. ಈಗ ಮತ್ತೆ ಅದೇ ರೀತಿ ರಾಜ ಪ್ರಭುತ್ವಗಳು ತಲೆ ಎತ್ತಲು ಪ್ರಾರಂಭವಾಗಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಪ್ರಬುದ್ಧ ಚಿಂತನೆಗಳನ್ನು ಹೊಂದಿರಬೇಕು ಆರ್ಥಿಕ ಬಡತನದಲ್ಲಿ ಜನರನ್ನು ಇಟ್ಟು ಅವರಿಗೆ ಆಮಿಷಗಳನ್ನು ಕೊಟ್ಟು ಅಧಿಕಾರಿ ಹಿಡಿಯುವ ರಾಜಕಾರಣದ ಕುತಂತ್ರಗಾರಿಕೆಯಿಂದ ರಾಜಪ್ರಭುತ್ವದ ಕಡೆ ಪ್ರಜಾಪ್ರಭುತ್ವ ಸಾಗುತ್ತಿದೆ. ಇದನ್ನು ಪ್ರಜ್ಞಾವಂತ ಮತದಾರರು ಖಂಡಿಸಬೇಕಾಗಿದೆ.

ಕರ್ನಾಟಕದ ಲೋಕಸಭಾ ಕ್ಷೇತ್ರದ ಅನೇಕ ಕಡೆಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಒಗ್ಗೂಡಿಸಿ ಭಾರತೀಯ ಪ್ರಜಾಪ್ರಭುತ್ವದ ಸ್ವತಂತ್ರ ಅಭ್ಯರ್ಥಿಗಳ ಒಕ್ಕೂಟದಿಂದ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿದ್ದೇವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗಣೇಶ್ ಬಿ ಬೆಳ್ಳಿ ಅವರು ಕಾರವಾರ ಕ್ಷೇತ್ರದಿಂದ ಕೃಷ್ಣ ಬಳೆಗಾರ್, ಹಾವೇರಿಯಿಂದ ಸಿದ್ದು ಪೂಜಾರ, ಹುಬ್ಬಳ್ಳಿ ಧಾರವಾಡದಿಂದ ಜಾವಿದ್ ಹೀಗೆ ಅನೇಕ ಕಡೆಗಳಲ್ಲಿ ಚುನಾವಣೆಗೆ ನಿಲ್ಲುತಿದ್ದೇವೆ. ನಮ್ಮ ಗುರಿ ಪ್ರಜಾಪ್ರಭುತ್ವದ ಮೌಲ್ಯಗಳ ಪ್ರಚಾರ ಮತ್ತು ರಾಜಕೀಯ ಶುದ್ಧೀಕರಣ ಮೌಲ್ಯಯುತ ರಾಜಕಾರಣದ ಮರು ಸ್ಥಾಪನೆಯ ಉದ್ದೇಶ ಹೊಂದಿದೆ ಎಂದರು.


ಶಿವಮೊಗ್ಗ ಜಿಲ್ಲೆಯ ಎಲ್ಲಾ ಮತದಾರರು ನನ್ನನ್ನು ಗುರುತಿಸಿ ನಿಮ್ಮ ಅತ್ಯುಮೂಲ್ಯ ಮತವನ್ನು ನನಗೆ ನೀಡಿ ಈ ಪ್ರಜಾಪ್ರಭುತ್ವವನ್ನು ಉಳಿಸಲು ಪ್ರಯತ್ನಿಸಿ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಿದ್ದು ಪೂಜಾರ್, ಕೃಷ್ಣ ಬಳೆಗಾರ್, ಕುಮಾರ್ ನಾಯ್ಕ್, ಜೀವನ್‌ಕುಮಾರ್, ಮಂಜುನಾಥ್, ಟಿ.ಆರ್.ಕೃಷ್ಣಪ್ಪ ಮುಂತಾದವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago