ಪ್ರೀತಿಸುವಂತೆ ಕಾಟ ಕೊಡುತ್ತಿದ್ದ ಯುವಕ, ನೇಣಿಗೆ ಕೊರಳೊಡ್ಡಿದ ಅಪ್ರಾಪ್ತೆ !
ಶಿವಮೊಗ್ಗ : ಯುವಕನ ಕಿರುಕುಳಕ್ಕೆ ಬೇಸತ್ತು 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ.
ವರ್ಷಿಣಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯುವಕನ ಕಿರುಕುಳಕ್ಕೆ ನೊಂದು ಬಾಲಕಿ ನೇಣಿಗೆ ಕೊರಳೊಡ್ಡಿದ್ದಾಳೆ. ತ್ಯಾಗರಾಜ್ ಎಂಬ ಯುವಕ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ. ಬಾಲಕಿ ಪೋಷಕರು ತ್ಯಾಗರಾಜ್ ಗೆ 2 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿದ್ದರು. ಆದರೂ ತ್ಯಾಗರಾಜ್ ಬಾಲಕಿಗೆ ಕಾಟಕೊಡುತ್ತಲೇ ಇದ್ದ. ಯುವಕನ ಕಾಟಕ್ಕೆ ನೊಂದ ವರ್ಷಿಣಿ ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾಳೆ.
ಈ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.