ಶಿವಮೊಗ್ಗ : ಪ್ರೇಮಿಗಳ ನಡುವೆ ಕಿರಿಕ್ ಆಗಿ ಹಾಡೋನಹಳ್ಳಿಯ ಯುವಕ ಚೇತನ್ ಅದೇ ಗ್ರಾಮದ ಯುವತಿ ಅಂಬಿಕಾಳಿಗೆ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಗರದ ಶಿವಪ್ಪನಾಯಕ ವೃತ್ತದ ಬಳಿ ನಡೆದಿದೆ.
ಇರಿತಯೊಳಕ್ಕಾದ ಯುವತಿಯನ್ನು ಸ್ಥಳದಲ್ಲಿದ್ದ ಸಾರ್ವಜನಿಕರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು ಕೋಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪ್ರಕರಣ ದಾಖಲಿಸಲಾಗಿದೆ.
ಘಟನಾ ವಿವರ:
ಶಿವಮೊಗ್ಗ ಹೊರವಲಯದ ಹೊಳಲೂರು ಸಮೀಪದ ಹಾಡೋನಹಳ್ಳಿಯ ಈ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಯುವಕ ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ನಲ್ಲಿ ವರ್ಕ್ ಶಾಪ್ ಒಂದರ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಇಂದು ಮಧ್ಯಾಹ್ನ 2:32 ಹೊತ್ತಿಗೆ ಈ ಘಟನೆ ನಡೆದಿದ್ದು ಅದೇ ಗ್ರಾಮದ ಯುವತಿಗೆ ಚಾಕುವಿನಿಂದ ಇರಿದು ಕಾಲ್ಕಿತ್ತಿದ್ದಾನೆ. ತಕ್ಷಣ ಸಾರ್ವಜನಿಕರು ಆತನನ್ನು ಹಿಡಿದು ಕೋಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆಕೆ ಸಹ ಮನೆಯಲ್ಲಿಯೇ ಇರುತ್ತಿದ್ದಳು ಎನ್ನಲಾಗಿದ್ದು, ಪ್ರೀತಿಗೆ ಎರಡು ಮನೆಯವರು ಒಪ್ಪಿಕೊಂಡಿಲ್ಲ ಎನ್ನುವುದು ಒಂದು ಕಡೆಯ ನಿಲುವಾದರೆ ಮತ್ತೊಂದು ಕಡೆ ಯುವತಿ ಯುವಕನ ಬಗ್ಗೆ ಅಸಮಾಧಾನ ಹಾಗೂ ಆಕ್ರೋಶ ಹೊಂದಿದ್ದಳು ಎನ್ನವಾಗಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…