ಶಿವಮೊಗ್ಗ : ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್ ದೇಶದಲ್ಲಿ ಡಾಕ್ಟರ್ ಎಂದು ನಂಬಿಸಿ 6.50 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ:
ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್ಬುಕ್ಗೆ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಆಕೆ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್ ನಡೆಸಿದ್ದರು. ತಾನೊಬ್ಬ ವೈದ್ಯ, ಇಂಗ್ಲೆಂಡ್ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ ಕಳುಹಿಸುವುದಾಗಿ ತಿಳಿಸಿದ್ದ. ಮೇ 16ರಂದು ಮಹಿಳೆಯ ಮೊಬೈಲ್ ಸಂಖ್ಯೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ, ತಾನು ಏರ್ಪೋರ್ಟ್ ಅಧಿಕಾರಿ ಎಂದು ಹೇಳಿದ್ದ. ನಿಮಗೆ ಕೊರಿಯರ್ ಬಂದಿದ್ದು ಅದಕ್ಕೆ ಕಸ್ಟಮ್ ವೆಚ್ಚ ತಗುಲಲಿದೆ ಎಂದು ಹೇಳಿದ್ದನು.
ಆ ವ್ಯಕ್ತಿಯ ಮಾತು ನಂಬಿದ ಮಹಿಳೆ ಮೇ 16ರಿಂದ 20ರವರೆಗೆ ಬೇರೆ ಬೇರೆ ಸಮಯದಲ್ಲಿ 6.50 ಲಕ್ಷ ಹಣ ವರ್ಗಾಯಿಸಿದ್ದರು. ಆ ಬಳಿಕ ವೈದ್ಯ ಮತ್ತು ಏರ್ಪೋರ್ಟ್ ಅಧಿಕಾರಿ ಸೋಗಿನ ವ್ಯಕ್ತಿ ಸಂಪರ್ಕಕ್ಕೆ ಸಿಕ್ಕಿಲ್ಲ. ತಾನು ವಂಚನೆಗೊಳಗಾಗಿರುವುದು ಗೊತ್ತಾಗುತ್ತಿದ್ದಂತೆಯೇ ಮಹಿಳೆ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…