ಶಿವಮೊಗ್ಗ : ಮಲೆನಾಡು ಶಿವಮೊಗ್ಗದಲ್ಲಿ ಮಳೆಯ ಕೊರತೆ ಉಂಟಾಗಿದ್ದು ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದ ಒಡಲು ಬರಿದಾಗುವ ಹಂತ ತಲುಪಿದ್ದು ಸಿಗಂದೂರು ಲಾಂಚ್ ಸೇವೆ ಸ್ಥಗಿತಗೊಳ್ಳುವ ಆತಂಕ ಶುರುವಾಗಿದೆ. ಜನರು ಹಾಗೂ ಲಾಂಚ್ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಸ್ಥಗಿತ ಸಾಧ್ಯತೆ ಇದೆ.
ಲಾಂಚ್ ಸ್ಥಗಿತಗೊಂಡರೆ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬರುವ ಯಾತ್ರಿಕರಿಗೆ ತೀವ್ರ ತೊಂದರೆ ಉಂಟಾಗಲಿದ್ದು ಲಾಂಚ್ ಸ್ಥಗಿತವಾದರೆ ಭಕ್ತರು, ಪ್ರವಾಸಿಗರು ಹೊಸನಗರ ಮಾರ್ಗವಾಗಿ ಸಿಗಂದೂರು ತಲುಪಬೇಕಿದೆ.
ಹೊಸನಗರ, ನಗರ, ಸಂಪೆಕಟ್ಟೆ-ನಿಟ್ಟೂರು ಮಾರ್ಗವಾಗಿ ಸುತ್ತು ಬಳಸಿ ದೇವಸ್ಥಾನಕ್ಕೆ ಹೋಗಬೇಕಾದ ಅನಿವಾರ್ಯತೆ ಇದ್ದು ಲಿಂಗನಮಕ್ಕಿ ಜಲಾಶಯ ಈಗಾಗಲೇ ಬಹುತೇಕ ಬರಿದಾದ ಹಿನ್ನಲೆಯಲ್ಲಿ ಶರಾವತಿ ಹಿನ್ನೀರು ಭಾಗದ ಎರಡು ಲಾಂಚ್ ಸೇವೆ ಈಗಾಗಲೇ ಸ್ಥಗಿತವಾಗಿವೆ.
ಕಳೆದ ಮೇ 26 ರಿಂದಲೇ ಸ್ಥಗಿತಗೊಂಡಿರುವ ಸಾಗರ ತಾಲೂಕಿನ ಮುಪ್ಪಾನೆ ಲಾಂಚ್ ಜೂನ್ 4 ರಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತಗೊಂಡಿದೆ. ಇದೀಗ ಮೂರನೇಯದಾಗಿ ಹೊಳೆಬಾಗಿಲಿನ ಲಾಂಚ್ ಸಹ ಸ್ಥಗಿತಗೊಳ್ಳುವ ಆತಂಕ ಶುರುವಾಗಿದೆ.
ಹಿನ್ನೀರು ಭಾಗದಲ್ಲಿ ಲಾಂಚ್ ನಿಲ್ಲಿಸುವ ಫ್ಲಾಟ್ ಫಾರ್ಮ್ ನಿಂದ ಕೆಳಮಟ್ಟಕ್ಕೆ ನೀರು ಹೋಗಿದ್ದು ಬಳಕೆಗೆ ಬಾರದಂತೆ ಹೊಳೆಬಾಗಲು, ಅಂಬಾರಗೊಡ್ಲು ತಟದ ಪ್ಲಾಟ್ ಫಾರ್ಮ್ ಗಳು ಆಗಿವೆ. ಲಾಂಚ್ ಸ್ಥಗಿತದಿಂದ ಹಿನ್ನೀರು ಭಾಗದ ಸುಮಾರು 30 ಸಾವಿರ ಜನರಿಗೆ ಸಂಪರ್ಕ ಕಡಿತದ ಭೀತಿ ಶುರುವಾಗಿದೆ.
ಸಾಗರ ತಾಲೂಕಿನ ಸಿಗಂದೂರು, ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ ಸಂಪರ್ಕ ಕೊಂಡಿಯಾಗಿದ್ದ ಲಾಂಚ್ ಸೇವೆ, ದಿನನಿತ್ಯದ ಓಡಾಟ, ಆರೋಗ್ಯ ಸೇವೆಗೆ ಲಾಂಚ್ ಸ್ಥಗಿತದಿಂದ ತೀವ್ರ ಹಿನ್ನಡೆ ಉಂಟಾಗಲಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…